Featured

ಏಕನಾಥ್ ಶಿಂಧೆಗೆ ಸಿಎಂ ಆಫರ್ ನೀಡಿದ ಉದ್ಧವ್ ಠಾಕ್ರೆ : ತಿರಸ್ಕರಿಸಿದ ಬಂಡಾಯ ನಾಯಕ – VIshwanews24

ಏಕನಾಥ್ ಶಿಂಧೆಗೆ ಸಿಎಂ ಆಫರ್ ನೀಡಿದ ಉದ್ಧವ್ ಠಾಕ್ರೆ : ತಿರಸ್ಕರಿಸಿದ ಬಂಡಾಯ ನಾಯಕ

ಮುಂಬೈ: ಮಹಾರಾಷ್ಟ್ರದಲ್ಲಿ ಸಿಎಂ ಉದ್ದವ್ ಠಾಕ್ರೆ ವಿರುದ್ದ ಬಂಡಾಯವೆದ್ದ ನಾಯಕ ಏಕನಾಥ್ ಶಿಂಧೆ ಅವರಿಗೆ ಉದ್ದವ್ ಠಾಕ್ರೆ ಹಾಗೂ ಎನ್‌ಸಿಪಿ ನಾಯಕ ಶರದ್ ಪವಾರ್‍ ಅವರು ಮುಖ್ಯಮಂತ್ರಿ ಸ್ಥಾನದ ಆಫರ್‍ ನೀಡಿದ್ದಾರೆ. ಆದರೆ ಶಿಂಧೆ ಇದನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಏಕನಾಥ ಶಿಂಧೆ ಅವರೊಂದಿಗೆ ಕೆಲವು ಶಾಸಕರು ಕೂಡಾ ಬಂಡಾಯ ಗುಂಪಿನಲ್ಲಿ ಕಾಣಿಸಿಕೊಂಡ ಕಾರಣ ಮಹಾ ಸರ್ಕಾರ ಪಥನವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದ ನಡುವೆ ರಾತ್ರೋರಾತ್ರಿ ಸಿಎಂ ಉದ್ದವ್ ಠಾಕ್ರೆ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿ ಬಾಂದ್ರಾದಲ್ಲಿರುವ ಕುಟುಂಬದ ಮಾತೋಶ್ರೀಗೆ ತೆರಳಿದ್ದರು. ಈ ನಡುವೆ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ವಸತಿ ಸಚಿವ ಜಿತೇಂದ್ರ ಅಹ್ವಾದ್ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೋರಿದ್ದರು.

ಅಲ್ಲದೆ ತಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದವಿದ್ದು, ಬಂಡಾಯ ಶಾಸಕರು ಸಿಎಂ ಆಗಬಹುದು. ಆದರೆ ಅವರು ಶಿವಸೇನೆಯವರೇ ಆಗಿರಬೇಕು ಎಂದು ಉದ್ದವ್ ಠಾಕ್ರೆ ಕೂಡಾ ಹೇಳಿದ್ದರು. ಆದರೆ ಬಂಡಾಯ ಗುಂಪಿನಲ್ಲಿ ಅತಿಹೆಚ್ಚು ಸಂಖ್ಯಾಬಲ ಹೊಂದಿರುವ ಶಿಂಧೆ ಅವರು ಈ ಆಫರ್‌ನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

9 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

10 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago