ಗುರುಗ್ರಾಮ : ಸ್ಲೀಪರ್ ಬಸ್ ಗೆ ಏಕಾಏಕಿ ಹೊತ್ತಿ ಉರಿದ ಪರಿಣಾಮ, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾದ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ. ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ಗೆ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಬಸ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ನಿದ್ರಾವಸ್ಥೆಯಲ್ಲಿದ್ದ ಇಬ್ಬರು ಬೆಂಕಿ ಕೆನ್ನಾಲಿಗೆಗೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸ್ಲೀಪರ್ ಬಸ್ನಿಂದ ಎರಡು ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೊಂದೆಡೆ, ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ದೆಹಲಿ ಜೈಪುರ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಆಗಿತ್ತು. ಜಾಮ್ ತೆರವುಗೊಳಿಸಲು ಪೊಲೀಸ್ ಸಿಬ್ಬಂದಿ ತುಂಬಾ ಕಷ್ಟಪಡುವಂತಾಯಿತು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…