Featured

ಏಕ್ ಥಾ ಟೈಗರ್ ‘ಸಲ್ಲು’ ಗೆ ಜಾಮೀನು

ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ನಟ ಸಲ್ಮಾನ್ ಖಾನ್‌ಗೆ ಜೋಧಪುರ ಸೆಷನ್ಸ್ ನ್ಯಾಯಾಲಯ  ಜಾಮೀನು ಮಂಜೂರು ಮಾಡಿದೆ.

ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ರವೀಂದ್ರ ಕುಮಾರ್ ಜೋಶಿ ಜಾಮೀನು ನೀಡಿ ತೀರ್ಪು ಪ್ರಕಟಿಸಿದರು. ಜೋಧಪುರ ಜೆಎಂಸಿ ನ್ಯಾಯಾಲಯ ಸಲ್ಮಾನ್ ಖಾನ್‌ಗೆ ಕಳೆದ ಗುರುವಾರ ಶಿಕ್ಷೆ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಸಲ್ಮಾನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಜೋಧಪುರ ಸೆಷನ್ಸ್ ನ್ಯಾಯಾಲಯದ ನ್ಯಾ.ರವೀಂದ್ರ ಕುಮಾರ್ ಜೋಶಿ ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಿದ್ದರು.

ಶನಿವಾರ ಬೆಳಿಗ್ಗೆ ಪುನಃ ವಿಚಾರಣೆ ಆರಂಭಿಸಿದ ನ್ಯಾಯಾಲಯ ಮಧ್ಯಾಹ್ನ ಜಾಮೀನು ಮಂಜೂರು ಮಾಡಿದೆ. ಸಲ್ಮಾನ್ ನಟನೆಯ ಸಿನಿಮಾಗಳ ಮೇಲೆ ಕೋಟ್ಯಂತರ ರುಪಾಯಿ ಹೂಡಿಕೆ ಮಾಡಿದ್ದ ಬಾಲಿವುಡ್‌ನ ನಿರ್ಮಾಪಕರು ಸದ್ಯ ನಿರಾಳರಾಗಿ ದ್ದಾರೆ. ಸಲ್ಮಾನ್ ಜೈಲು ಸೇರಿದ್ದರಿಂದ 800 ಕೋಟಿ ಮೊತ್ತದ ಸಿನಿಮಾಗಳ ಭವಿಷ್ಯ ಅತಂತ್ರವಾಗಿತ್ತು. ಭಾರಿ ಪ್ರಮಾಣದ ನಷ್ಟ ಉಂಟಾಗಲಿದೆ ಎಂದು ನಿರ್ಮಾಪಕರು ಕಳವಳ ವ್ಯಕ್ತಪಡಿಸಿದ್ದರು.

ರಾಜಸ್ಥಾನದ ವಿವಿಧ ನ್ಯಾಯಾಲಯಗಳಿಂದ ನ್ಯಾಯಾಧೀಶರನ್ನು ಶುಕ್ರವಾರ ರಾತ್ರಿ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ ಸಲ್ಮಾನ್ ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿದ್ದ ರವೀಂದ್ರ ಜೋಶಿ ಮತ್ತು ಸಲ್ಮಾನ್‌ಗೆ ಐದು ವರ್ಷ ಶಿಕ್ಷೆ ವಿಧಿಸಿದ ದೇವ್ ಕುಮಾರ್ ಖತ್ರಿ ಸೇರಿದ್ದರು. ತೀರ್ಪು ಪ್ರಕಟಿಸುವುದಕ್ಕೂ ಮುನ್ನ ನ್ಯಾಯಾಧೀಶರು ಸೆಷನ್ಸ್ ನ್ಯಾಯಾಲಯದಲ್ಲಿ ಸಮಾಲೋಚನೆ ನಡೆಸಿದ್ದರು. ನ್ಯಾ.ಜೋಶಿ ಅವರ ವರ್ಗಾವಣೆಯಿಂದ ಸಲ್ಮಾನ್‌ ಜಾಮೀನು ಅರ್ಜಿಯ ಭವಿಷ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು.

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್‌ ಅವರನ್ನು ದೋಷಿ ಎಂದು ಪರಿಗಣಿಸಿದ್ದ ಜೋಧಪುರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಸಹ ಆರೋಪಿಗಳಾಗಿದ್ದ ನಟರಾದ ಸೈಫ್ ಅಲಿಖಾನ್, ಸೊನಾಲಿ ಬೇಂದ್ರೆ, ಟಬು, ನೀಲಂ ಕೊಠಾರಿ ಮತ್ತು ಸ್ಥಳೀಯ ಪ್ರವಾಸಿ ಗೈಡ್ ವಿರುದ್ಧ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಅವರನ್ನು ಖುಲಾಸೆ ಮಾಡಲಾಗಿತ್ತು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago