ನವದೆಹಲಿ: 15ನೇ ರಾಷ್ಟ್ರಪತಿಯಾಗಿ ಇಂದು ದ್ರೌಪದಿ ಮುರ್ಮು ಅಧಿಕಾರ ಸ್ವೀಕರಿಸಿದ್ದಾರೆ.
ಸೆಂಟ್ರಲ್ ಹಾಲ್ನಲ್ಲಿ ಮುರ್ಮು ಅವರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಿದರು.
ಈ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ಮೋದಿ ಆದಿಯಾಗಿ ಸಚಿವರು ಸಂಸದರು ಉಪಸ್ಥಿತರಿದ್ದರು.
ಅಧಿಕಾರ ಸ್ವೀಕರಿಸಿದ ನಂತರ ಭಾಷಣ ಮಾಡಿದ ಅವರು, ನಾನು ಹುಟ್ಟಿದಾಗ ದೇಶ ಸ್ವಾತಂತ್ರ್ಯ ಸಂಭ್ರಮದಲ್ಲಿತ್ತು. ಈಗ 75 ವರ್ಷದ ಸಂಭ್ರಮದಲ್ಲಿ ನಾನು ರಾಷ್ಟ್ರಪತಿಯಾಗುತ್ತಿದ್ದೇನೆ. ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕಾಗಿ ಕೆಲಸ ಮಾಡುವೆ. ಮಹಿಳಾ ಸಬಲೀಕರಣ ನನ್ನ ಮೊದಲ ಆದ್ಯತೆ ಎಂದು ಹೇಳಿದರು.
ಬಡವರು ಕನಸು ಕಾಣಬಹುದು, ಅದನ್ನು ನನಸು ಮಾಡಿಕೊಳ್ಳಬಹುದು. ನನ್ನ ಹಳ್ಳಿಯಲ್ಲಿ ಕಾಲೇಜಿಗೆ ತೆರಳಿದ ಮೊದಲ ಮಹಿಳೆ ನಾನು. ಸ್ವಾತಂತ್ರ್ಯ ಭಾರತದಲ್ಲಿ ಹುಟ್ಟಿದ ಮೊದಲ ರಾಷ್ಟ್ರಪತಿಯಾಗಿದ್ದೇನೆ. ಸಂವಿಧಾನದ ಮೇಲೆ ಪೂರ್ಣ ನಿಷ್ಠೆ ಇಟ್ಟು ಕೆಲಸ ಮಾಡುವೆ ಎಂದು ಪ್ರತಿಜ್ಞೆ ಮಾಡಿದರು.
ದ್ರೌಪದಿ ಮುರ್ಮು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದವರಾಗಿದ್ದಾರೆ. 20 ಜೂನ್ 1958 ಜನಿಸಿದ ಅವರು ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಯಾಗಿದ್ದು, ಸ್ವಾತಂತ್ರ್ಯೊತ್ತರ ಜನಿಸಿದ ವ್ಯಕ್ತಿಯೊಬ್ಬರು ರಾಷ್ಟ್ರಪತಿಯಾಗಿತ್ತಿರುವುದು ಇದೇ ಮೊದಲು. ದ್ರೌಪದಿ ಮುರ್ಮು ಪದಗ್ರಹಣ ಹಿನ್ನೆಲೆಯಲ್ಲಿ ಸ್ವಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…