Featured

ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ : ಡಿ .ಕೆ ಶಿವಕುಮಾರ್ -Vishwanews24

ಮುಂಬೈ: ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ ಎಂದು ಜಲಸಂಪನ್ಮೂಲ ಸಚಿವ ಡಿ .ಕೆ ಶಿವಕುಮಾರ್ ಹೇಳಿದ್ದಾರೆ.

ಅತೃಪ್ತ ಶಾಸಕರನ್ನು ಭೇಟಿಯಾಗದೇ ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯಲ್ಲ ಎಂದು ಹಠ ಹಿಡಿದಿರುವ ಡಿಕೆಶಿ, ಬೆಳಗ್ಗಿನಿಂದಲೂ ಹೋಟೆಲ್ ಮುಂಭಾಗದಿಂದ ಕದಲಿಲ್ಲ. ಹೋಟೆಲ್ ಒಳಗಡೆ ಬಿಡುವವರೆಗೂ ನಾನು ಇಡೀ ದಿನ ಇಲ್ಲೇ ಕಾಯ್ತೀನಿ ಎಂದು ಹೇಳಿದ್ದಾರೆ.

ಮುಂಬೈ ಬಿಟ್ಟು ಹೋಗಲ್ಲ, ನನ್ನನ್ನ ಬೇಕಾದರೆ ಬಂಧಿಸಲಿ ಎಂದಿದ್ದಾರೆ. ಜೊತೆಯಲ್ಲಿ ಸಚಿವ ಜಿ.ಟಿ. ದೇವೇಗೌಡ ಸೇರಿದಂತೆ ಜೆಡಿಎಸ್ ಶಾಸಕರು ಭಾಗಿಯಾಗಿದ್ದಾರೆ. ಇನ್ನೂ ಸ್ಥಳಕ್ಕೆ ಮುಂಬೈ ಕಾಂಗ್ರೆಸ್ ಮುಖಂಡರ ಆಗಮಿಸಿದ್ದಾರೆ. ಡಿಸಿಪಿ ಸಂಗ್ರಾಮಸಿಂಗ್ ಎಷ್ಟೇ ಮನವೊಲಿಸಿದರು ಪಟ್ಟು ಬಿಡದೆ ಡಿ. ಕೆ. ಶಿವಕುಮಾರ್ ಹೊಟೆಲ್ ಮುಂದೆಯೇ ನಿಂತಿದ್ದಾರೆ.

ಹೋಟೆಲ್ ಒಳಗಡೆ ಹೋಗಲು ಪೊಲೀಸರು ನಿರಾಕರಿಸುತ್ತಿದ್ದಂತೆಯೇ ಡಿಕೆಶಿ ಹಾಗೂ ಪೊಲೀಸರ ಮಧ್ಯೆ ಮಾತುಕತೆ ನಡೆದಿದೆ. ನಾವು ಒಂದೇ ಕುಟುಂಬದವರು. ನಮ್ಮ ಮಧ್ಯೆ ಸ್ವಲ್ಪ ಸಮಸ್ಯೆ ಆಗಿದೆ. ಅದನ್ನು ನಾವು ಸರಿಪಡಿಸಲು ಬಂದಿದ್ದೇವೆಯೋ ಹೊರತು, ಬೆದರಿಕೆ ಹಾಕಲು ಬಂದಿಲ್ಲ. ನಿನ್ನೆ ಬಿಜೆಪಿಯವರನ್ನು ಬಿಟ್ಟಿದ್ದೀರಿ, ಆದರೆ ಇವತ್ತು ನಮ್ಮವರನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸುವ ಮೂಲಕ ಸಚಿವರು ಮನವಿ ಮಾಡಿಕೊಂಡರೂ ಪೊಲೀಸರು  ಒಪ್ಪಿಲ್ಲ. ಹೀಗಾಗಿ ಇಬ್ಬರು ಮುಖಂಡರೊಂದಿಗೆ ಡಿಕೆಶಿ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ.

ಒಂದೆಡೆ ಅತೃಪ್ತರು ಡಿಕೆಶಿ ಭೇಟಿಗೆ ನಿರಾಕರಿಸಿದರೆ ಇತ್ತ ಸಚಿವರು ನಾನು ಶಾಸಕರನ್ನು ಭೇಟಿ ಮಾಡಿಯೇ ಬೆಂಗಳೂರಿಗೆ ವಾಪಸ್ಸಾಗುವುದು ಎಂಬ ಹಠಕ್ಕೆ ಬೀಳುವ ಮೂಲಕ ಮುಂಬೈನಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

1 hour ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

1 hour ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

2 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago