Featured

ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ : ಡಿ .ಕೆ ಶಿವಕುಮಾರ್ -Vishwanews24

ಮುಂಬೈ: ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ ಎಂದು ಜಲಸಂಪನ್ಮೂಲ ಸಚಿವ ಡಿ .ಕೆ ಶಿವಕುಮಾರ್ ಹೇಳಿದ್ದಾರೆ.

ಅತೃಪ್ತ ಶಾಸಕರನ್ನು ಭೇಟಿಯಾಗದೇ ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯಲ್ಲ ಎಂದು ಹಠ ಹಿಡಿದಿರುವ ಡಿಕೆಶಿ, ಬೆಳಗ್ಗಿನಿಂದಲೂ ಹೋಟೆಲ್ ಮುಂಭಾಗದಿಂದ ಕದಲಿಲ್ಲ. ಹೋಟೆಲ್ ಒಳಗಡೆ ಬಿಡುವವರೆಗೂ ನಾನು ಇಡೀ ದಿನ ಇಲ್ಲೇ ಕಾಯ್ತೀನಿ ಎಂದು ಹೇಳಿದ್ದಾರೆ.

ಮುಂಬೈ ಬಿಟ್ಟು ಹೋಗಲ್ಲ, ನನ್ನನ್ನ ಬೇಕಾದರೆ ಬಂಧಿಸಲಿ ಎಂದಿದ್ದಾರೆ. ಜೊತೆಯಲ್ಲಿ ಸಚಿವ ಜಿ.ಟಿ. ದೇವೇಗೌಡ ಸೇರಿದಂತೆ ಜೆಡಿಎಸ್ ಶಾಸಕರು ಭಾಗಿಯಾಗಿದ್ದಾರೆ. ಇನ್ನೂ ಸ್ಥಳಕ್ಕೆ ಮುಂಬೈ ಕಾಂಗ್ರೆಸ್ ಮುಖಂಡರ ಆಗಮಿಸಿದ್ದಾರೆ. ಡಿಸಿಪಿ ಸಂಗ್ರಾಮಸಿಂಗ್ ಎಷ್ಟೇ ಮನವೊಲಿಸಿದರು ಪಟ್ಟು ಬಿಡದೆ ಡಿ. ಕೆ. ಶಿವಕುಮಾರ್ ಹೊಟೆಲ್ ಮುಂದೆಯೇ ನಿಂತಿದ್ದಾರೆ.

ಹೋಟೆಲ್ ಒಳಗಡೆ ಹೋಗಲು ಪೊಲೀಸರು ನಿರಾಕರಿಸುತ್ತಿದ್ದಂತೆಯೇ ಡಿಕೆಶಿ ಹಾಗೂ ಪೊಲೀಸರ ಮಧ್ಯೆ ಮಾತುಕತೆ ನಡೆದಿದೆ. ನಾವು ಒಂದೇ ಕುಟುಂಬದವರು. ನಮ್ಮ ಮಧ್ಯೆ ಸ್ವಲ್ಪ ಸಮಸ್ಯೆ ಆಗಿದೆ. ಅದನ್ನು ನಾವು ಸರಿಪಡಿಸಲು ಬಂದಿದ್ದೇವೆಯೋ ಹೊರತು, ಬೆದರಿಕೆ ಹಾಕಲು ಬಂದಿಲ್ಲ. ನಿನ್ನೆ ಬಿಜೆಪಿಯವರನ್ನು ಬಿಟ್ಟಿದ್ದೀರಿ, ಆದರೆ ಇವತ್ತು ನಮ್ಮವರನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸುವ ಮೂಲಕ ಸಚಿವರು ಮನವಿ ಮಾಡಿಕೊಂಡರೂ ಪೊಲೀಸರು  ಒಪ್ಪಿಲ್ಲ. ಹೀಗಾಗಿ ಇಬ್ಬರು ಮುಖಂಡರೊಂದಿಗೆ ಡಿಕೆಶಿ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ.

ಒಂದೆಡೆ ಅತೃಪ್ತರು ಡಿಕೆಶಿ ಭೇಟಿಗೆ ನಿರಾಕರಿಸಿದರೆ ಇತ್ತ ಸಚಿವರು ನಾನು ಶಾಸಕರನ್ನು ಭೇಟಿ ಮಾಡಿಯೇ ಬೆಂಗಳೂರಿಗೆ ವಾಪಸ್ಸಾಗುವುದು ಎಂಬ ಹಠಕ್ಕೆ ಬೀಳುವ ಮೂಲಕ ಮುಂಬೈನಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

14 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

15 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

15 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

15 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

15 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

15 hours ago