ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಾಗೂ ಪಕ್ಷದ ವೈಭವಕ್ಕೆ ಎಲ್ಲವನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಪ್ರಧಾನಿ ಮೋದಿ ಬೆಂಗಳೂರು ಭೇಟಿ ವಿಚಾರವಾಗಿ ಶುಕ್ರವಾರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪ್ರಗತಿ ಪ್ರತಿಮೆ ಅನಾವರಣ ಹಾಗೂ ಮೋದಿ ಕಾರ್ಯಕ್ರಮ, ಕಾಮಗಾರಿ, ವ್ಯವಸ್ಥೆಗೆ 48.44 ಕೋಟಿ ವೆಚ್ಚ ಮಾಡಿರುವ ಕುರಿತಾದ ಪ್ರಶ್ನೆಗೆ ಈ ರೀತಿಯಲ್ಲಿ ಉತ್ತರ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಬರೆದ ಪತ್ರಕ್ಕೆ ಪ್ರಧಾನಿ ಮೋದಿ ಉತ್ತರ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಇನ್ನೊಬ್ಬರು ಲಂಚದಿಂದ ಸಮಸ್ಯೆ ಆಗುತ್ತಿದೆ ಎಂದು ದಯಾ ಮರಣಕ್ಕೆ ಪತ್ರ ಬರೆದಿದ್ದಾರೆ. ಒಂದು ಭ್ರಷ್ಟ ಆಡಳಿತವನ್ನು ಸ್ವಚ್ಛ ಮಾಡಬೇಕು. ಆದರೆ ಮೋದಿ ತಮ್ಮ ವೈಭವಕ್ಕೆ, ಪಕ್ಷದ ವೈಭವಕ್ಕೆ ಎಲ್ಲವನ್ನೂ ಮಾಡಿಕೊಳ್ತಿದ್ದಾರೆ. ನಮ್ಮ ಪತ್ರಕ್ಕೆ ಉತ್ತರ ಬಂದಿಲ್ಲ ಅಂದ್ರೆ ಮುಂದೆ ಏನು ಮಾಡಬೇಕೋ ಮಾಡ್ತೇವೆ ಎಂದರು.
ಮಲ್ಪೆ: ಬೀಚ್ ಅಭಿವೃದ್ಧಿ ಸಮಿತಿಯಿಂದ ಹಿಂದೂ ರುದ್ರಭೂಮಿಯಲ್ಲಿ ಕಡು ಬಡವರಿಗೆ ಯಾವುದೇ ಶುಲ್ಕ ಸ್ವೀಕರಿಸುವುದಿಲ್ಲ..
ಗುಂಡಿ ಹೇಗೆ ಮುಚ್ಚುತ್ತಿದ್ದಾರೋ, ಭ್ರಷ್ಟಾಚಾರದ ವಿಚಾರಕ್ಕೆ ಏನು ಸಂದೇಶ ಕೊಟ್ಟು ಹೋಗ್ತಾರೆ ನೋಡ್ತೇವೆ. ಮುಂದಿನ ಹೋರಾಟದ ಬಗ್ಗೆ ಈಗಲೇ ಹೇಳಲ್ಲ. ಐದು ನಿಮಿಷಕ್ಕೆ ಊಟ ರೆಡಿ ಆಗತ್ತಾ? ಮಸಾಲೆ ರೆಡಿ ಮಾಡಬೇಕು ಕಟ್ಟಿಗೆ ರೆಡಿ ಮಾಡಬೇಕು ಎಂದರು.
ಪ್ರತಿಮೆ ನಿರ್ಮಾಣ ಏರ್ ಪೋರ್ಟ್ ಅಥಾರಿಟಿಯಿಂದ ಆಗಬೇಕಿತ್ತು ಎಂಬ ವಿಚಾರವಾಗಿ ಮಾತನಾಡಿ, ನಾನು ಮೊದಲೇ ಹೇಳಿದ್ದೆ, ಈಗ ಹೇಳ್ತಿರೋದಲ್ಲ. ಬೇಕಿದ್ರೆ ನನ್ನ ಬೈಟ್ ಪಾಯಿಂಟ್ಸ್ ತೆಗೆದು ನೋಡಲಿ. ಏರ್ ಪೋರ್ಟ್ ನವರೇ ಮಾಡ್ತಾ ಇದ್ರು, 50- 60 ಕೋಟಿ ಹಣ ಖರ್ಚು ಮಾಡುವುದು ಏರ್ ಪೋರ್ಟ್ ನವರಿಗೆ ದೊಡ್ಡ ವಿಚಾರ ಅಲ್ಲ. ಬಿಜೆಪಿಯವರು ಏನೇನೋ ಲೆಕ್ಕಾಚಾರ ಹಾಕಿಕೊಂಡು ಮಾಡ್ತಿದ್ದಾರೆ. ಏರ್ ಪೋರ್ಟ್ ಆವರಣ, ಅವರೇ ಮಾಡಬೇಕಿತ್ತು, ಇದು ಬೇಸಿಕ್ ಕಾಮನ್ ಸೆನ್ಸ್ ಎಂದರು.
ಸರ್ಕಾರದ ದುಡ್ಡನ್ನು ಹೇಗೆ ಉಳಿಸಬೇಕು ಬಳಸಬೇಕು ಅನ್ನೋದು ಬೇಸಿಕ್ ಕಾಮನ್ ಸೆನ್ಸ್. ಇವರು ಏನೋ ದೊಡ್ಡ ಹೆಸರು ಮಾಡಿಕೊಳ್ಳಬೇಕು ಅಂತ ಬಹಳ ಅರ್ಜೆಂಟ್ ನಲ್ಲಿದ್ದಾರೆ. ಪ್ರಧಾನಿ ಮೋದಿ ತಮ್ಮ ವೈಭವ ಹಾಗೂ ಪಾರ್ಟಿ ವೈಭವ ಅದಕ್ಕಾಗಿ ಎಷ್ಟು ಖರ್ಚಾಗ್ತಿದೆ ಅನ್ನೋದಕ್ಕೆ ನಿಮ್ಮ ಬಳಿಯೇ ಮಾಹಿತಿ ಇದೆ. ಏನು ವೈಭವ ಮಾಡಿಕೊಳ್ಳಲಿ ಎಷ್ಟೇ ಜನ ಕರೆಸಲಿ ಏನೇ ಮಾಡಿದ್ರು ಜನ ಇವರನ್ನು ಕಿತ್ತೊಗೆಯಬೇಕು ಅಂತ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…