ಬೆಂಗಳೂರು: ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತದ ವಿಚಾರವಾಗಿ ಬಿಜೆಪಿ (BJP) ಹೋರಾಟ ಮಾಡಿರೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಕೂಡ ಹೆಗಲು ಮೇಲೆ ಹೊರೋಣ. ನೋಡೋಣ ಏನಾಗುತ್ತೆ. ಹೆಣದ ಮೇಲೆ ರಾಜಕೀಯ ಬಿಟ್ಟು, ಅವ್ರೇನು ಮಾಡಿದ್ದಾರೆ? ಯಾವ ಸಾಮಾಜಿಕ ಕಾರ್ಯಕರ್ತರು ಸಹಕಾರ ನೀಡೋದಿಲ್ಲ. ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನ ತೆಗೆದುಕೊಳ್ಳುತ್ತದೆ ಎಂದು ಉತ್ತರಿಸಿದ್ದಾರೆ.
ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ನಾವು ಅನೇಕ ಪ್ರಕರಣಗಳನ್ನು ಕೇಳುತ್ತೇವೆ. ಗಂಗಾಧರ ಪ್ರಕರಣದ ಬಗ್ಗೆ ನಾವು ಕೇಳುತ್ತೇವೆ. ನಾನು ಅಹಮದಾಬಾದ್ಗೆ ಹೋಗಿದ್ದೆ. ನಾನು ಕೇಂದ್ರ ಸರ್ಕಾರವನ್ನ ಯಾವತ್ತೂ ದೂಷಿಸಿಲ್ಲ. ದೇವಾಲಯದಲ್ಲಿ ಕಾಲ್ತುಳಿತ ಆಗಿದೆ. ಅನೇಕ ಕಡೆ ಕಾಲ್ತುಳಿತ ಆಗಿದೆ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ಮಂಗಳವಾರ ವಿಧಾನಸೌಧದಲ್ಲಿ ಪರಿಸರ ನಡಿಗೆ ಕಾರ್ಯಕ್ರಮವನ್ನ ಸರ್ಕಾರ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಬಹಳ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ನೀವೆಲ್ಲರೂ ನಮ್ಮ ದೇಶವನ್ನು ರಕ್ಷಣೆ ಮಾಡಲು ಬಂದಿದ್ದೀರಿ. ನಮ್ಮ ಮಕ್ಕಳು ದೊಡ್ಡ ಮಟ್ಟಕ್ಕೆ ಬೆಳೆಯಬೇಕು. ನಾವು ನಿಮ್ಮೆಲ್ಲರಿಗೂ ವಿಧಾನಸೌಧ ಪ್ರವೇಶಕ್ಕೆ ಅವಕಾಶ ಕೊಟ್ಟಿದ್ದೇವೆ. ವಿಧಾನಸೌಧಕ್ಕೆ ಭೇಟಿ ನೀಡಿ ಎಂದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…