ಬೆಂಗಳೂರು: ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತದ ವಿಚಾರವಾಗಿ ಬಿಜೆಪಿ (BJP) ಹೋರಾಟ ಮಾಡಿರೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಕೂಡ ಹೆಗಲು ಮೇಲೆ ಹೊರೋಣ. ನೋಡೋಣ ಏನಾಗುತ್ತೆ. ಹೆಣದ ಮೇಲೆ ರಾಜಕೀಯ ಬಿಟ್ಟು, ಅವ್ರೇನು ಮಾಡಿದ್ದಾರೆ? ಯಾವ ಸಾಮಾಜಿಕ ಕಾರ್ಯಕರ್ತರು ಸಹಕಾರ ನೀಡೋದಿಲ್ಲ. ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನ ತೆಗೆದುಕೊಳ್ಳುತ್ತದೆ ಎಂದು ಉತ್ತರಿಸಿದ್ದಾರೆ.
ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ನಾವು ಅನೇಕ ಪ್ರಕರಣಗಳನ್ನು ಕೇಳುತ್ತೇವೆ. ಗಂಗಾಧರ ಪ್ರಕರಣದ ಬಗ್ಗೆ ನಾವು ಕೇಳುತ್ತೇವೆ. ನಾನು ಅಹಮದಾಬಾದ್ಗೆ ಹೋಗಿದ್ದೆ. ನಾನು ಕೇಂದ್ರ ಸರ್ಕಾರವನ್ನ ಯಾವತ್ತೂ ದೂಷಿಸಿಲ್ಲ. ದೇವಾಲಯದಲ್ಲಿ ಕಾಲ್ತುಳಿತ ಆಗಿದೆ. ಅನೇಕ ಕಡೆ ಕಾಲ್ತುಳಿತ ಆಗಿದೆ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ಮಂಗಳವಾರ ವಿಧಾನಸೌಧದಲ್ಲಿ ಪರಿಸರ ನಡಿಗೆ ಕಾರ್ಯಕ್ರಮವನ್ನ ಸರ್ಕಾರ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಬಹಳ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ನೀವೆಲ್ಲರೂ ನಮ್ಮ ದೇಶವನ್ನು ರಕ್ಷಣೆ ಮಾಡಲು ಬಂದಿದ್ದೀರಿ. ನಮ್ಮ ಮಕ್ಕಳು ದೊಡ್ಡ ಮಟ್ಟಕ್ಕೆ ಬೆಳೆಯಬೇಕು. ನಾವು ನಿಮ್ಮೆಲ್ಲರಿಗೂ ವಿಧಾನಸೌಧ ಪ್ರವೇಶಕ್ಕೆ ಅವಕಾಶ ಕೊಟ್ಟಿದ್ದೇವೆ. ವಿಧಾನಸೌಧಕ್ಕೆ ಭೇಟಿ ನೀಡಿ ಎಂದಿದ್ದಾರೆ.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…