Featured

ಏಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ : ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ – vishwanews24

ಏಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ : ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎಪ್ರಿಲ್ 10 ರಿಂದ ಪ್ರಾರಂಭಗೊಳ್ಳಲಿದೆ. 10 ದಿನಗಳ ಕಾಲ ನಡೆಯಲಿರುವ ಈ ಜಾತ್ರೆಯಲ್ಲಿ ಈ ಹಿಂದೆಯಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಈ ಹಿಂದೆ ಮಾಡಿದ ಮನವಿಯಂತೆ ಈ ಬಾರಿಯೂ ಇದೇ ವ್ಯವಸ್ಥೆಯನ್ನು ಮುಂದುವರಿಸಲು ಕ್ಷೇತ್ರದ ವ್ಯವಸ್ಥಾಪನ ಸಮಿತಿ ನಿರ್ಧರಿಸಿದೆ.

ಎಪ್ರಿಲ್ 10 ರಿಂದ 20 ರ ತನಕ ಈ ಜಾತ್ರೆ ನಡೆಯಲಿದ್ದು, ಈ ಬಾರಿಯೂ ಅನ್ಯಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲು ನಿರ್ಧರಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎನ್ನುವ ಮನವಿ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ಆ ಸಂದರ್ಭದಲ್ಲಿ ಕಾಂಗ್ರೇಸ್ ವಿರೋಧಿಸಿತ್ತು. ಹಿಂದೂಪರ ಸಂಘಟನೆಗಳ ಈ ಮನವಿಗೆ ಸ್ಪಂದಿಸಬಾರದು ಎನ್ನುವ ಒತ್ತಾಯಗಳ ನಡುವೆಯೇ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅನ್ಯಮತೀಯರ ವ್ಯಾಪಾರದ ನಿಶೇಧವನ್ನು ಈ ಬಾರಿಯೂ ಮುಂದುವರಿಸಿದ್ದಾರೆ.

ಈ ಜಾತ್ರೆಯ ದಿನಗಳಲ್ಲಿ ಕ್ಷೇತ್ರದಲ್ಲಿ ಅತೀ ಹೆಚ್ಚು ಜನ ಸೇರುವ ಕಾರಣಕ್ಕೆ ಅತೀ ಹೆಚ್ಚಿನ ವ್ಯಾಪಾರ-ವ್ಯವಹಾರದ ಕೇಂದ್ರವಾಗಿಯೂ ಬದಲಾಗುತ್ತದೆ. ಏಲಂ ಪ್ರಕ್ರಿಯೆಯ ಮೂಲಕ ಅಂಗಡಿಗಳ ಏಲಂ ಪ್ರಕ್ರಿಯೆಗಳು ಇಲ್ಲಿ ನಡೆಯುತ್ತಿದ್ದು, ಈ ಬಾರಿ ಏಲಂ ಪ್ರಕ್ರಿಯೆಯಲ್ಲೂ ಹಲವು ಮಾರ್ಪಾಡುಗಳನ್ನು ತರಲು ಉದ್ಧೇಶಿಸಲಾಗಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಈ ನಿರ್ಧಾರವನ್ನು ಹಿಂದೂಪರ ಸಂಘಟನೆಗಳು ಸ್ಚಾಗತಿಸಿವೆ. ಆದರೆ ವ್ಯವಸ್ಥಾಪನಾ ಸಮಿತಿ ಮತ್ತು ಶಾಸಕರ ಈ ನಡೆಗೆ ಅಸಮಾಧಾನವೂ ಕೇಳಿಬರಲಾರಂಭಿಸಿದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago