ಶ್ರೀನಗರ: ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆ ಅಮರನಾಥ ಯಾತ್ರೆಯನ್ನು ರದ್ದು ಮಾಡಲಾಗಿತ್ತು. ಆದರೆ ಮತ್ತೆ ಇದಕ್ಕೆ ಚಾಲನೆ ನೀಡಲಾಗಿದೆ. ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ಭಕ್ತಾದಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಅಮರನಾಥಜೀ ಪುಣ್ಯ ಕ್ಷೇತ್ರದ ಸಿಇಓ ನಿತೀಶ್ವರ್ ಕುಮಾರ್ ಹೇಳಿದ್ದಾರೆ.
ಜೂನ್ 30 ರಿಂದ ಆಗಸ್ಟ್ 11ರ ವರೆಗೂ ಯಾತ್ರೆ ನಡೆಸಲು ತೀರ್ಮಾನಿಸಲಾಗಿದ್ದು, ಯಾತ್ರೆ ಕೈಗೊಳ್ಳುವ ಭಕ್ತಾದಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಶ್ರೈನ್ ಬೋರ್ಡ್ನ ವೆಬ್ಸೈಟ್ ಅಥವಾ ಮೂಬೈಲ್ ಅಪ್ಲಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೊರೊನಾದಿಂದಾಗಿ ಕಳೆದ ಎರಡು ವರ್ಷದಿಂದ ಯಾತ್ರೆ ರದ್ದಾಗಿದ್ದು, ಈ ವರ್ಷ ಮೂರು ಲಕ್ಷ ಜನರು ಯಾತ್ರೆ ಮಾಡುವ ನಿರೀಕ್ಷೆಗಳಿದೆ. ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ 3,000 ಜನರು ಉಳಿದುಕೊಳ್ಳಲು ವ್ಯವಸ್ಥೆ ಇರುವ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗಿದೆ. ಅಲ್ಲಿ ಭಕ್ತಾಧಿಗಳು ತಂಗಲು ಅವಕಾಶ ಮಾಡಿಕೊಡಲಾಗಿದೆ.
2019 ಆಗಸ್ಟ್ 5 ರಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಮೊದಲ ಬಾರಿ ಯಾತ್ರೆಯನ್ನು ಭದ್ರತೆಯ ಕಾರಣದಿಂದ ರದ್ದು ಮಾಡಲಾಗಿತ್ತು. ಇದಾದ ಬಳಿಕ ಎರಡು ವರ್ಷ ಕೊರೊನಾ ಕಾರಣಗಳಿಂದ ರದ್ದು ಮಾಡಲಾಗಿತ್ತು. ಕಳೆದ ಮೂರು ವರ್ಷಗಳಿಂದ ಅಮರನಾಥ ಯಾತ್ರೆ ನಡೆದಿರಲಿಲ್ಲ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…