ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದೆ. ಅದರಂತೆ, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ. ಈ ಮೊದಲು ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾವೇಶ ಇದೀಗ ಮಂಗಳೂರಿಗೆ ಸ್ಥಳಾಂತರಗೊಂಡಿದೆ.
ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಲಿದ್ದಾರೆ.
ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ, ಮೊದಲಿಗೆ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಎಂದು ಈ ಹಿಂದೆ ನಿಗದಿಯಾಗಿತ್ತು. ಸಮಾವೇಶ ಮುಗಿದ ನಂತರ ಬೆಂಗಳೂರಿಗೆ ಆಗಮಿಸಿ, ಸಂಜೆ ಶೋಭಾ ಕರಂದ್ಲಾಜೆ ಕ್ಷೇತ್ರವಾದ ಬೆಂಗಳೂರು ಉತ್ತರದಲ್ಲಿ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಾಗಿತ್ತು. ಆದರೆ, ಇದೀಗ ಚಿಕ್ಕಬಳ್ಳಾಪುರದ ಬದಲು ಮಂಗಳೂರಿನಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ನಂತರ ಬೆಂಗಳೂರಿನಲ್ಲಿ ರೋಡ್ ಶೋ ನಿಗದಿಯಂತೆಯೇ ನಡೆಯಲಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…