ಮಂಡ್ಯ, : ಕರ್ನಾಟಕ ವಿಧಾನಸಭಾ ಚುನಾವಣೆ ಕಣರಂಗೇರುತ್ತಿದ್ದಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಅವರು ಏಪ್ರಿಲ್ 16ಕ್ಕೆ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಡ್ಯದಲ್ಲಿ ಈಗಾಗಲೇ ಟಿಕೆಟ್ ಪಡೆದು ಪ್ರಚಾರ ಆರಂಭಿಸಿರುವ ಎಂ ಶ್ರೀನಿವಾಸ್ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮೊದಲಿನಿಂದಲೂ ಜೆಡಿಎಸ್ ಪ್ರಾಬಲ್ಯವಿದೆ. ಎಚ್ಡಿ ದೇವೇಗೌಡ, ಎಚ್ಡಿ ಕುಮಾರಸ್ವಾಮಿ ಹಾಗೂ ಹಾಲಿ ಶಾಸಕ ಎಂ ಶ್ರೀನಿವಾಸ್ ಅವರ ಬೆಂಬಲಿಗರು ಕಾರ್ಯಕರ್ತರ ಬಹುದೊಡ್ಡ ಪಡೆ ಇದೆ.
ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ಚುನಾವಣಾ ರಂಗ ಜೋರಾಗಿದೆ. ಎಲ್ಲ ಪಕ್ಷಗಳಿಂದಲೂ ಪ್ರಚಾರವೂ ನಡೆಯುತ್ತಿದೆ. ಜೆಡಿಎಸ್ನಿಂದ ಈಗಾಗಲೇ ಟಿಕೆಟ್ ಪಡೆದಿರುವ ಎಂ.ಶ್ರೀನಿವಾಸ್ ಅವರು ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದಿದ್ದು, ಏಪ್ರಿಲ್ 16ಕ್ಕೆ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಅವರದು ರೈತಾಪಿ ಕುಟುಂಬ. ಹನಕೆರೆಯಲ್ಲಿಯೇ ಪ್ರಾಥಮಿಕ ಹಾಗೂ ಮಾಧ್ಯಮಿಕ ವಿದ್ಯಾಭ್ಯಾಸ ಮುಗಿಸಿದರು. ಪ್ರೌಢಶಾಲಾ ಶಿಕ್ಷಣವನ್ನು ಮಂಡ್ಯದ ಸರ್ಕಾರಿ ಪ್ರೌಢಶಾಲೆಯಲ್ಲೂ (ಕಲ್ಲುಕಟ್ಟಡ), ಬಿಎಸ್ಸಿ ಪದವಿಯನ್ನು ಮೈಸೂರಿನ ಎಂಡಿಟಿಡಿಬಿ ಕಾಲೇಜಿನಲ್ಲಿ ಮುಗಿಸಿದರು. ಕಾನೂನು ಪದವಿಯನ್ನು ಮಂಡ್ಯದ ಹೊಂಬೇಗೌಡ ಕಾನೂನು ಕಾಲೇಜಿನಲ್ಲಿ ಪಡೆದು ವಕೀಲಿ ವೃತ್ತಿಯನ್ನು ಮಂಡ್ಯದಲ್ಲಿಯೇ ಪ್ರಾರಂಭಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…