Featured

ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ  : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ  : ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು: ಈ ವರ್ಷದ ಬೇಸಿಗೆಯಲ್ಲಿ ಎಪ್ರಿಲ್‌ನಿಂದ ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬಿಸಿಗಾಳಿ: ರಾಜ್ಯದ ಹಲವೆಡೆ ಎ.2 ರಿಂದ 14 ದಿನಗಳ ಕಾಲ ಬಿಸಿಗಾಳಿ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಾದ ಚಿತ್ರದುರ್ಗ ಗದಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆ ಗಳಲ್ಲಿ ಬಿಸಿಗಾಳಿ ಕಾಣಿಸಿಕೊಳ್ಳಲಿದೆ.

ಬಿಸಿಗಾಳಿ ಸಂದರ್ಭಗಳಲ್ಲಿ ಅತ್ಯಧಿಕ ತಾಪಮಾನವು ವೃದ್ಧರು, ಮಕ್ಕಳು ಹಾಗೂ ಆನಾರೋಗ್ಯಪೀಡಿತರ ಮೇಲೆ ಪರಿಣಾಮ ಬೀರಲಿದ್ದು, ಮುಖ್ಯವಾಗಿ ಶಾಖದೊತ್ತಡ, ನಿರ್ಜಲೀಕರಣ ಆಯಾಸ ಕಂಡು ಬರಲಿದೆ. ಮೂಲ ಸೌಕರ್ಯಗಳಾದ ವಿದ್ಯುತ್ ಸರಬರಾಜು ಮತ್ತು ಸಾರಿಗೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ.

ಈ ಸವಾಲುಗಳನ್ನು ಎದುರಿಸಲು ಅಧಿಕಾರಿಗಳು ಪೂರ್ವಭಾವಿ ಕ್ರಮ ಕೈಗೊಳ್ಳುವುದು ಅಗತ್ಯ. ಬಿಸಿಗಾಳಿ ಪರಿಣಾಮಗಳನ್ನು ನಿವಾರಿಸಲು ಕಾರ್ಯತಂತ್ರಗಳನ್ನು ರೂಪಿಸಬೇಕಾಗಿದೆ. ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಮತ್ತು ಬಿಸಿಗಾಳಿಯ ಪ್ರತಿಕೂಲ ಪರಿಣಾಮಗಳನ್ನು ಕಡಿಮೆ ಮಾಡಲು ಇಂತಹ ಪ್ರಯತ್ನ ಅತ್ಯಗತ್ಯ ಎಂದು ಇಲಾಖೆ ಸಲಹೆ ನೀಡಿದೆ.

ಗರಿಷ್ಠ ತಾಪಮಾನ : 2024ರ ಎಪ್ರಿಲ್ ತಿಂಗಳಲ್ಲಿ ಗರಿಷ್ಠ ತಾಪಮಾನ ರಾಜ್ಯದ ಹಲವೆಡೆ ವಾಡಿಕೆಗಿಂತ ಅಧಿಕವಾಗಿರುವ ಮತ್ತು ಕನಿಷ್ಠ ತಾಪಮಾನವು ಅಧಿಕವಾಗುವ ಸಾಧ್ಯತೆ ಇದೆ.

ಬಿಸಿಗಾಳಿ: ರಾಜ್ಯದ ಹಲವೆಡೆ ಎಪ್ರಿಲ್ 2 ರಿಂದ 5 ದಿನಗಳು ಬಿಸಿಗಾಳಿ ಕಾಣಬರುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆ ಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆ ಗಳಾದ ಚಿತ್ರದುರ್ಗ , ಗದಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಫುರ , ಕೋಲಾರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆ ಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಇಲಾಖೆ ಸೂಚನೆ ನೀಡಿದೆ.

ಮಳೆ ಮುನ್ಸೂಚನೆ : ರಾಜ್ಯದ ಉತ್ತರ ಒಳನಾಡಿನ ಜಿಲ್ಲೆ ಗಳಲ್ಲಿ ವಾಡಿಕೆಗಿಂತಾ ಅಧಿಕ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆ ಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago