ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ.
5 ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವನ್ನು ಮೋದಿಯವರು 2ನೇ ಬಾರಿ ಉದ್ಘಾಟಿಸಿದ್ದಾರೆ. ಮುಂದಿನ 5 ದಿನಗಳ ಕಾಲ ಸಿಲಿಕಾನ್ ಸಿಟಿಯ ನಭದಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿರಲಿದೆ. 2015ರಲ್ಲೂ ಮೋದಿಯವರು ಏರೋ ಇಂಡಿಯಾವನ್ನು ಉದ್ಘಾಟಿಸಿದ್ದರು.
ಆವೃತ್ತಿಯಿಂದ ಆವೃತ್ತಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿರುವ ಏರೋ ಇಂಡಿಯಾ ಈ ಬಾರಿಯೂ ತನ್ನ ಪ್ರದರ್ಶನ ವ್ಯಾಪ್ತಿಯನ್ನು ಶೇ.3ರಷ್ಟು ವಿಸ್ತಾರಗೊಳಿಸಿಕೊಂಡಿದೆ. ಹೀಗಾಗಿ ಕಳೆದ ವರ್ಷಕ್ಕಿಂತ ರಕ್ಷಣಾ ಕ್ಷೇತ್ರಕ್ಕೆ ಹೆಚ್ಚು ಹೂಡಿಕೆ ಬರುವ ನಿರೀಕ್ಷೆಗಳಿವೆ.
2021ರಲ್ಲಿ ನಡೆದ 13ನೇ ಆವೃತ್ತಿಯ ವೈಮಾನಿಕ ಪ್ರದರ್ಶನದಲ್ಲಿ 600 ಮಂದಿ ಪ್ರದರ್ಶಕರು ಭಾಗವಹಿಸಿದ್ದರು. ಈ ಸಂಖ್ಯೆ ಪ್ರಸಕ್ತ ವೈಮಾನಿಕ ಪ್ರದರ್ಶನದಲ್ಲಿ 809ಕ್ಕೆ ಹೆಚ್ಚಳವಾಗಿದೆ. ಕಳೆದ ವರ್ಷ 55 ರಾಷ್ಟ್ರಗಳು ಮಾತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದು, ಪ್ರಸ್ತುತ 98 ರಾಷ್ಟ್ರಗಳು ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿವೆ. ಒಟ್ಟು 251 ಒಡಂಬಡಿಕೆ ಸಿದ್ಧಗೊಂಡಿದ್ದು, ಕಳೆದ ವರ್ಷ 23 ಸಾವಿರ ಚದರ ಮೀಟರ್ ವ್ಯಾಪ್ತಿಗೆ ಸೀಮಿತವಾಗಿದ್ದ ಪ್ರದರ್ಶನ ವ್ಯವಸ್ಥೆಯು ಈ ಬಾರಿ 35,000 ಚದರ ಮೀಟರ್ ವ್ಯಾಪ್ತಿಗೆ ವಿಸ್ತರಿಸಿದೆ.
ಕಳೆದ ಬಾರಿ 67 ವಿಮಾನಗಳು ವೈಮಾನಿಕ ಪ್ರದರ್ಶನ ನೀಡಿದ್ದವು. ಈ ಬಾರಿ ಸಾರಂಗ್, ಸೂರ್ಯಕಿರಣ್ ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೇಲ್, ತೇಜಸ್ ಸೇರಿದಂತೆ ಒಟ್ಟು 67 ವಿಮಾನಗಳು ಪ್ರದರ್ಶನ ನೀಡಲಿವೆ. ಉಳಿದಂತೆ ಸ್ವ್ಯಾಟಿಕ್ ಡಿಸ್ ಪ್ಲೇಯಲ್ಲಿ 36 ವಿಮಾನಗಳು ಪ್ರದರ್ಶನಗೊಳ್ಳಲಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…