Featured

ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ – Vishwanews24

ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ.

5 ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವನ್ನು ಮೋದಿಯವರು 2ನೇ ಬಾರಿ ಉದ್ಘಾಟಿಸಿದ್ದಾರೆ. ಮುಂದಿನ 5 ದಿನಗಳ ಕಾಲ ಸಿಲಿಕಾನ್ ಸಿಟಿಯ ನಭದಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿರಲಿದೆ. 2015ರಲ್ಲೂ ಮೋದಿಯವರು ಏರೋ ಇಂಡಿಯಾವನ್ನು ಉದ್ಘಾಟಿಸಿದ್ದರು.

ಆವೃತ್ತಿಯಿಂದ ಆವೃತ್ತಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿರುವ ಏರೋ ಇಂಡಿಯಾ ಈ ಬಾರಿಯೂ ತನ್ನ ಪ್ರದರ್ಶನ ವ್ಯಾಪ್ತಿಯನ್ನು ಶೇ.3ರಷ್ಟು ವಿಸ್ತಾರಗೊಳಿಸಿಕೊಂಡಿದೆ. ಹೀಗಾಗಿ ಕಳೆದ ವರ್ಷಕ್ಕಿಂತ ರಕ್ಷಣಾ ಕ್ಷೇತ್ರಕ್ಕೆ ಹೆಚ್ಚು ಹೂಡಿಕೆ ಬರುವ ನಿರೀಕ್ಷೆಗಳಿವೆ.

2021ರಲ್ಲಿ ನಡೆದ 13ನೇ ಆವೃತ್ತಿಯ ವೈಮಾನಿಕ ಪ್ರದರ್ಶನದಲ್ಲಿ 600 ಮಂದಿ ಪ್ರದರ್ಶಕರು ಭಾಗವಹಿಸಿದ್ದರು. ಈ ಸಂಖ್ಯೆ ಪ್ರಸಕ್ತ ವೈಮಾನಿಕ ಪ್ರದರ್ಶನದಲ್ಲಿ 809ಕ್ಕೆ ಹೆಚ್ಚಳವಾಗಿದೆ. ಕಳೆದ ವರ್ಷ 55 ರಾಷ್ಟ್ರಗಳು ಮಾತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದು, ಪ್ರಸ್ತುತ 98 ರಾಷ್ಟ್ರಗಳು ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿವೆ. ಒಟ್ಟು 251 ಒಡಂಬಡಿಕೆ ಸಿದ್ಧಗೊಂಡಿದ್ದು, ಕಳೆದ ವರ್ಷ 23 ಸಾವಿರ ಚದರ ಮೀಟರ್ ವ್ಯಾಪ್ತಿಗೆ ಸೀಮಿತವಾಗಿದ್ದ ಪ್ರದರ್ಶನ ವ್ಯವಸ್ಥೆಯು ಈ ಬಾರಿ 35,000 ಚದರ ಮೀಟರ್ ವ್ಯಾಪ್ತಿಗೆ ವಿಸ್ತರಿಸಿದೆ.

ಕಳೆದ ಬಾರಿ 67 ವಿಮಾನಗಳು ವೈಮಾನಿಕ ಪ್ರದರ್ಶನ ನೀಡಿದ್ದವು. ಈ ಬಾರಿ ಸಾರಂಗ್, ಸೂರ್ಯಕಿರಣ್ ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೇಲ್, ತೇಜಸ್ ಸೇರಿದಂತೆ ಒಟ್ಟು 67 ವಿಮಾನಗಳು ಪ್ರದರ್ಶನ ನೀಡಲಿವೆ. ಉಳಿದಂತೆ ಸ್ವ್ಯಾಟಿಕ್ ಡಿಸ್ ಪ್ಲೇಯಲ್ಲಿ 36 ವಿಮಾನಗಳು ಪ್ರದರ್ಶನಗೊಳ್ಳಲಿವೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago