ನವದೆಹಲಿ: ಏರ್ ಇಂಡಿಯಾ ವಿಮಾನಗಳಲ್ಲಿ ಇನ್ನುಮುಂದೆ ಜೈಹಿಂದ್ ಎಂಬ ಘೋಷಣೆ ಕೇಳಿಬರಲಿದೆ. ವಿಮಾನ ಸಿಬ್ಬಂದಿ ತಕ್ಷಣವೇ ಜಾರಿಗೆ ಬರುವಂತೆ ಈ ಆದೇಶ ಪಾಲನೆ ಮಾಡಬೇಕು ಎಂದು ಏರ್ ಇಂಡಿಯಾ ಕಾರ್ಯಕಾರಿ ನಿರ್ದೇಶದ ಅಮಿತಾಬ್ ಸಿಂಗ್ ಸೂಚಿಸಿದ್ದಾರೆ.
ಜೈ ಹಿಂದ್ ಘೋಷಣೆಯಿಂದ ಪ್ರಯಾಣಿಕರಲ್ಲಿ ಉತ್ಸಾಹವೂ ಹೆಚ್ಚುತ್ತದೆ. ಅಲ್ಲದೆ ಸದ್ಯದ ರಾಷ್ಟ್ರದ ಜನರ ಮನಸ್ಥಿತಿ ದೇಶಕ್ಕಾಗಿ ತುಡಿಯುತ್ತಿದೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಏರ್ ಇಂಡಿಯಾ ತಿಳಿಸಿದೆ.
ಏರ್ ಇಂಡಿಯಾದ ಮಾಜಿ ಮುಖ್ಯಸ್ಥ ಅಶ್ವನಿ ಲೋಹಾನಿ 2016ರಲ್ಲಿ ಇದೇ ರೀತಿ ಆದೇಶ ಹೊರಡಿಸಿದ್ದರು. ವಿಮಾನ ವಿಳಂಬದ ಸಮಯದಲ್ಲಿ ಸಿಬ್ಬಂದಿ ಅನಾದರಣೀಯವಾಗಿ, ಕಾಳಜಿಯಿಲ್ಲದ ರೀತಿ ವರ್ತಿಸುತ್ತಾರೆ ಎಂದು 2016ರಲ್ಲಿ ಗ್ರಾಹಕರಿಂದ ದೂರು ಬರತೊಡಗಿತ್ತು. ಆಗ ಅಶ್ವನಿ ಈ ನಿರ್ಧಾರ ತೆಗೆದುಕೊಂಡಿದ್ದರು.
ವಿಮಾನ ಟೇಕ್ಆಫ್ ಆಗುವ ವೇಳೆ ಫ್ಲೈಟ್ ಕಮಾಂಡರ್ ಜೈ ಹಿಂದ್ ಎಂದು ಘೋಷಣೆ ಕೂಗಬೇಕು ಎಂದು ಹೇಳಿದ್ದರು. ಇದು ಅದ್ಭುತ ಪ್ರಭಾವ ಬೀರಿತ್ತು. ಪ್ರಯಾಣಿಕರು ಮತ್ತು ಏರ್ಲೈನ್ ಸಿಬ್ಬಂದಿ ಮಧ್ಯ ಉತ್ತಮ ಸೌಹಾರ್ದ ಮೂಡಿಸುವಲ್ಲಿ ಇದು ಸಹಕಾರಿಯಾಗಿತ್ತು.
ವಿಮಾನದ ಕ್ಯಾಪ್ಟನ್, ಸೇವಾ ಸಿಬ್ಬಂದಿಗಳು ಪ್ರಯಾಣಿಕರ ಜೊತೆ ಸದಾ ಪರಸ್ಪರ ಸಂಪರ್ಕ ಹೊಂದಿರಲೇಬೇಕಾಗಿರುತ್ತದೆ. ಪ್ರತಿ ಸೂಚನೆಯ ನಂತರ ಜೈ ಹಿಂದ್ ಹೇಳುವುದರಿಂದ ಉತ್ತಮ ವಾತಾವರಣ ವಿಮಾನದಲ್ಲಿ ಉಂಟಾಗುತ್ತದೆ. ಪ್ರಯಾಣಿಕರ, ವಿಮಾನ ಸಿಬ್ಬಂದಿಯ ನಡುವೆ ಬಂಧ ಏರ್ಪಡುತ್ತದೆ ಎಂದು ಏರ್ ಇಂಡಿಯಾ ಹೇಳಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…