Featured

ಏರ್​ ಸ್ಟ್ರೈಕ್ ಎಫೆಕ್ಟ್ ; ಪಾಕ್ ನಲ್ಲಿ ಭಾರತೀಯ ಸಿನಿಮಾ ಹಾಗೂ ಭಾರತ ಮೂಲದ ಕಥಾಹಂದರದ ಸಿನಿಮಾಗಳು ನಿಷೇಧ – Vishwanews24

ಇಸ್ಲಾಮಾಬಾದ್,: ಭಾರತೀಯ ವಾಯುಸೇನೆ ಪಿಒಕೆಯಲ್ಲಿ ನಡೆಸಿದ ವಾಯುದಾಳಿ ಬಳಿಕ ಪಾಕಿಸ್ತಾನ ಸರ್ಕಾರ ಭಾರತೀಯ ಸಿನಿಮಾಗಳಿಗೆ ನಿಷೇಧ ಹೇರಿದೆ.

ಭಾರತವು ಗಡಿ ನಿಯಂತ್ರಣ ರೇಖೆಯನ್ನು ದಾಟಿ, ಪಾಕ್‌ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿದೆ ಎಂದು ಪಾಕ್ ಹೇಳುತ್ತಿದ್ದು, ಭಾರತದ ಕಾರ್ಯಾಚರಣೆಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಪಾಕಿಸ್ತಾನದಲ್ಲಿ ಭಾರತೀಯ ಸಿನಿಮಾಗಳಿಗೆ ಅಲ್ಲಿನ ಸಿನೆಮಾ ಎಕ್ಸಿಬಿಟರ್ಸ್‌ ಅಸೋಸಿಯೇಷನ್ ನಿಷೇಧ ಹೇರಿದೆ. ಅಲ್ಲದೆ ಭಾರತದ ಜಾಹಿರಾತುಗಳಿಗೂ ಅಲ್ಲಿ ನಿಷೇಧ ಹೇರಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಚೌದರಿ ಫವಾದ್ ಹುಸೇನ್, ಪಾಕಿಸ್ತಾನದಲ್ಲಿ ಇನ್ನು ಮುಂದೆ ಎಲ್ಲ ರೀತಿಯ ಚಿತ್ರಗಳಿಗೆ ನಿಷೇಧ ಹೇರಲಾಗುತ್ತದೆ. ಕೇವಲ ಭಾರತೀಯ ಚಿತ್ರಗಳು ಮಾತ್ರವಲ್ಲ ಭಾರತದ ಕಥಾ ಹಂದರವುಳ್ಳ ಚಿತ್ರಗಳನ್ನೂ ನಿಷೇಧಿಸಲಾಗಿದೆ ಎಂದು ಹೇಳಿದರು. ಅಲ್ಲದೆ ಮೇಡ್ ಇನ್ ಇಂಡಿಯಾ ಜಾಹಿರಾತುಗಳಿಗೂ ನಿಷೇಧ ಹೇರಲಾಗಿದ್ದು, ಈ ಕುರಿತು ಜಾಹಿರಾತು ಪ್ರಸಾರ ಮಾಡುವ ಮಾಧ್ಯಮಗಳ ಮೇಲೂ ನಿಷೇಧ ಹೇರಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಾಲಿವುಡ್ ಸಿನಿಮಾಗಳಿಗೆ ಪಾಕಿಸ್ತಾನದಲ್ಲಿ ಉತ್ತಮ ಮಾರುಕಟ್ಟೆ ಇದೆ. ಬಾಲಿವುಡ್ ಬಹುತೇಕ ಸಿನಿಮಾಗಳು ಪಾಕಿಸ್ತಾನದಲ್ಲಿ ಬಿಡುಗಡೆ ಆಗುತ್ತವೆ ಮತ್ತು ಉತ್ತಮವಾಗಿ ಪ್ರದರ್ಶನವೂ ಕಾಣುತ್ತವೆ. ಭಾರತದಲ್ಲಿ ಈಗಾಗಲೇ ಪಾಕಿಸ್ತಾನ ಕಲಾವಿದರಿಗೆ ನಿಷೇಧ ಹೇರಲಾಗಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago