ನವದೆಹಲಿ: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸುಮಾರು 300 ಮಂದಿ ಹಿರಿಯ ಪೈಲಟ್ ಗಳು ಸಾಮೂಹಿಕವಾಗಿ ರಜೆ ತೆಗೆದುಕೊಂಡಿದ್ದಾರೆ. ಜೊತೆಗೆ ತಮ್ಮ ಮೊಬೈಲ್ ಫೋನ್ ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಸುಮಾರು 79 ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಟಾಟಾ ಗ್ರೂಪ್ ಒಡೆತನದ ನೂತನ ಉದ್ಯೋಗ ನೀತಿಯನ್ನು ವಿರೋಧಿಸಿ ಪೈಲಟ್ ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಪೈಲಟ್ ಗಳನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಪೈಲೆಟ್ ಗಳ ಪ್ರತಿಭಟನೆಯಿಂದ ಮಂಗಳೂರು ಏರ್ಪೋರ್ಟ್ ನಲ್ಲಿ ವಿಮಾನ ಹಾರಾಟದಲ್ಲಿ ಇಂದು ಯಾವುದೇ ವ್ಯತ್ಯಯ ಕಂಡುಬಂದಿಲ್ಲ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…