ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಶಿವಮೊಗ್ಗ ಸಜ್ಜಾಗಿದೆ.
ಹೆಲಿಕಾಪ್ಟರ್ ಮೂಲಕ ಸಿಎಂ ಬೊಮ್ಮಾಯಿ ಈಗಾಗಲೇ ಶಿವಮೊಗ್ಗ ಬಂದಿಳಿದಿದ್ದು, ಅಲ್ಲಿನ ಸಿದ್ದತೆ ವೀಕ್ಷಿಸಿದ್ದಾರೆ.ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ದತೆ ನಡೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ.
ಯಡಿಯೂರಪ್ಪ ಹುಟ್ಟು ಹಬ್ಬದ ದಿನವೇ ಏರ್ ಪೋರ್ಟ್ ಉದ್ಘಾಟನೆಯಾಗುತ್ತಿರುವುದು ದೈವ ಇಚ್ಚೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿಎಸ್ವೈ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಮಲೆನಾಡಿನ ಆರ್ಥಿಕ ಹಾಗೂ ಪ್ರವಾಸೋದ್ಯಮಕ್ಕೆ ಸಹಾಯಕವಾಗಲಿದೆ. ಇದು ಅತ್ಯಂತ ವಿಶೇಷ ಹಾಗೂ ದೈವ ಇಚ್ಚೆಯಾಗಿದ್ದು, ಬಹಳ ವಿಶೇಷವಾಗಿದೆ. ಶಿವಮೊಗ್ಗಏರ್ ಪೋರ್ಟ್ ಉದ್ಘಾಟನೆ ಒಂದು ಮೈಲಿಗಲ್ಲು ಎಂದಿದ್ದಾರೆ.
ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮರೆಯಲಾಗದ ಕ್ಷಣ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ , ಇಡೀ ರಾಜ್ಯಾದ್ಯಂತ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ, ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮರೆಯಲಾಗದ ಕ್ಷಣ. ಮೋದಿ ಏರ್ಪೋರ್ಟ್ ಉದ್ಘಾಟನೆ ಮಾಡುತ್ತಿರುವುದು ನಮ್ಮ ಸೌಭಾಗ್ಯ ಎಂದು ವಿಜಯೇಂದ್ರ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…