ನವದೆಹಲಿ: ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಮಿ-17 ವಿ-5(Mi-17 V-5 )ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಕಲಾಪದ ಆರಂಭದಲ್ಲಿ ಹೇಳಿಕೆ ನೀಡಿದ್ದಾರೆ.
ಭಾರತೀಯ ವಾಯುಪಡೆ (ಐಎಎಫ್) ಸೇನಾ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತ್ರಿ-ಸೇವಾ ತನಿಖೆಗೆ ಆದೇಶಿಸಲಾಗಿದೆ. ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖಾ ತಂಡ ನಿನ್ನೆಯೇ ವೆಲ್ಲಿಂಗ್ಟನ್ ತಲುಪಿ ತನಿಖೆ ಆರಂಭಿಸಿದೆ ಎಂದು ಸದನಕ್ಕೆ ತಿಳಿಸಿದ್ದಾರೆ.
ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೊರತುಪಡಿಸಿ ಬೇರೆಲ್ಲರೂ ನಿಧನರಾಗಿದ್ದಾರೆ. ವರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಅಗತ್ಯವಿದ್ದರೆ ಮಿಲಿಟರಿ ಆಸ್ಪತ್ರೆಯಿಂದ ವೆಲ್ಲಿಂಗ್ಟನ್ ಕಮಾಂಡ್ ಆಸ್ಪತ್ರೆಗೆ ವರ್ಗಾಯಿಸಲಾಗುವುದು ಎಂದರು.
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಲ್ಲಿ ಜೀವರಕ್ಷಕರಾಗಿದ್ದಾರೆ. ಅವರ ಜೀವ ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…