Featured

ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ವಾಯುಸೇನೆಯ ಮುಖ್ಯಸ್ಥರಾದ ಮೈಂಡ್ ಬೀರೇಂದ್ರ ಸಿಂಗ್ ಧನೋವಾ – Vishwanews24

ನವದೆಹಲಿ: ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್ ವಾಯುಸೇನೆಯ ಮುಖ್ಯಸ್ಥರಾದ ಬೀರೇಂದ್ರ ಸಿಂಗ್ ಧನೋವಾ. ಸೆಪ್ಟೆಂಬರ್ 7, 1957ರಲ್ಲಿ ಜನಿಸಿದ ಧನೋವಾ ಅವರು ಸೇನಾಪಡೆಯಲ್ಲಿ 37 ವರ್ಷಗಳಿಂದ ಭಾರತದ ವಾಯು ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದಲ್ಲದೇ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿದ್ದ ಧನೋವಾ ಅವರೇ ಏರ್ ಸ್ಟ್ರೈಕ್‍ಗೆ ಸೂಚಿಸಿದ್ದರಂತೆ. ಪುಲ್ವಾಮಾದ ಆವಂತಿಪೋರ್ ನಲ್ಲಿ ನಡೆದ ದಾಳಿಗೆ ಸಂಬಂಧಪಟ್ಟಂತೆ ನಡೆದ ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರ ಸಭೆಯಲ್ಲಿ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋವಾ ಸಲಹೆ ನೀಡಿದ್ದರು ಅದು ಈಗ ಯಶಸ್ವಿಯಾಗಿದೆ.

ಧನೋವಾ ಅವರು 1999ರ ಕಾರ್ಗಿಲ್ ಯುದ್ಧದ ವೇಳೆ ಫೈಟರ್ ಸ್ಕ್ವಾಡ್ರನ್ ಮತ್ತು ಅಂದಿನ ಏರ್ ಫೋರ್ಸ್ ಮುಖ್ಯಸ್ಥರಾಗಿದ್ದ ಎ.ವೈ ಟಿಪ್ನಿಸ್ ಅವರಿಗೆ ಸಾಥ್ ನೀಡಿದ್ದರು. ಅಂದಿನ ಮಾರ್ಷಲ್ ಟಿಫ್ನಿಸ್ ಅವರೇ ಖುದ್ದಾಗಿ ಪೈಲಟ್‍ಗಳ ಜೊತೆಗೆ ತೆರಳಿ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿ ಯಶಸ್ವಿಯಾದರು. ಪಾಕಿಸ್ತಾನದ ನೆಲಕ್ಕೆ ನುಗ್ಗಿ ಬಾಲ್‍ಕೋಟ್‍ನಲ್ಲಿ 350 ಉಗ್ರರ ಚೆಂಡಾಡಿದ ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್. ಅಲ್ಲದೆ, ಈ ಸಂಪೂರ್ಣ ಆಪರೇಷನ್ ನಿರ್ವಹಿಸಿದವರು .

ಘಟನೆ ಬಳಿಕ ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ವೇಳೆ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋಆ ಸಲಹೆ ನೀಡಿದ್ದರು ಅಂತ ತಿಳಿದು ಬಂದಿದೆ.

1978ರಲ್ಲಿ ವಾಯು ಸೇನೆ ಸೇರಿದ್ದ ಧನೋವಾ, ಎಚ್‍ಜೆಟಿ-16 ಕಿರಣ್, ಸೆಪೆಕ್ಯಾಟ್, ಜಾಗ್ವಾರ್, ಮಿಗ್-29 ಹಾಗೂ ಸುಖೋಯ್-30 ಎಂಕೆಐ ಫೈಟರ್ ಜೆಟ್‍ಗಳನ್ನು ಹಾರಿಸಿದ್ದಾರೆ. ಈ ಮೂಲಕ ಪರಿಣತ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 37 ವರ್ಷಗಳ ಸೇವೆಯಲ್ಲಿ ಹಲವಾರು ಅತ್ಯುನ್ನತ ಪ್ರಶಸ್ತಿ, ಪದಕಗಳನ್ನು ಧನೋವಾ ಪಡೆದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago