Featured

ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ವಾಯುಸೇನೆಯ ಮುಖ್ಯಸ್ಥರಾದ ಮೈಂಡ್ ಬೀರೇಂದ್ರ ಸಿಂಗ್ ಧನೋವಾ – Vishwanews24

ನವದೆಹಲಿ: ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್ ವಾಯುಸೇನೆಯ ಮುಖ್ಯಸ್ಥರಾದ ಬೀರೇಂದ್ರ ಸಿಂಗ್ ಧನೋವಾ. ಸೆಪ್ಟೆಂಬರ್ 7, 1957ರಲ್ಲಿ ಜನಿಸಿದ ಧನೋವಾ ಅವರು ಸೇನಾಪಡೆಯಲ್ಲಿ 37 ವರ್ಷಗಳಿಂದ ಭಾರತದ ವಾಯು ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದಲ್ಲದೇ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿದ್ದ ಧನೋವಾ ಅವರೇ ಏರ್ ಸ್ಟ್ರೈಕ್‍ಗೆ ಸೂಚಿಸಿದ್ದರಂತೆ. ಪುಲ್ವಾಮಾದ ಆವಂತಿಪೋರ್ ನಲ್ಲಿ ನಡೆದ ದಾಳಿಗೆ ಸಂಬಂಧಪಟ್ಟಂತೆ ನಡೆದ ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರ ಸಭೆಯಲ್ಲಿ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋವಾ ಸಲಹೆ ನೀಡಿದ್ದರು ಅದು ಈಗ ಯಶಸ್ವಿಯಾಗಿದೆ.

ಧನೋವಾ ಅವರು 1999ರ ಕಾರ್ಗಿಲ್ ಯುದ್ಧದ ವೇಳೆ ಫೈಟರ್ ಸ್ಕ್ವಾಡ್ರನ್ ಮತ್ತು ಅಂದಿನ ಏರ್ ಫೋರ್ಸ್ ಮುಖ್ಯಸ್ಥರಾಗಿದ್ದ ಎ.ವೈ ಟಿಪ್ನಿಸ್ ಅವರಿಗೆ ಸಾಥ್ ನೀಡಿದ್ದರು. ಅಂದಿನ ಮಾರ್ಷಲ್ ಟಿಫ್ನಿಸ್ ಅವರೇ ಖುದ್ದಾಗಿ ಪೈಲಟ್‍ಗಳ ಜೊತೆಗೆ ತೆರಳಿ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿ ಯಶಸ್ವಿಯಾದರು. ಪಾಕಿಸ್ತಾನದ ನೆಲಕ್ಕೆ ನುಗ್ಗಿ ಬಾಲ್‍ಕೋಟ್‍ನಲ್ಲಿ 350 ಉಗ್ರರ ಚೆಂಡಾಡಿದ ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್. ಅಲ್ಲದೆ, ಈ ಸಂಪೂರ್ಣ ಆಪರೇಷನ್ ನಿರ್ವಹಿಸಿದವರು .

ಘಟನೆ ಬಳಿಕ ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ವೇಳೆ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋಆ ಸಲಹೆ ನೀಡಿದ್ದರು ಅಂತ ತಿಳಿದು ಬಂದಿದೆ.

1978ರಲ್ಲಿ ವಾಯು ಸೇನೆ ಸೇರಿದ್ದ ಧನೋವಾ, ಎಚ್‍ಜೆಟಿ-16 ಕಿರಣ್, ಸೆಪೆಕ್ಯಾಟ್, ಜಾಗ್ವಾರ್, ಮಿಗ್-29 ಹಾಗೂ ಸುಖೋಯ್-30 ಎಂಕೆಐ ಫೈಟರ್ ಜೆಟ್‍ಗಳನ್ನು ಹಾರಿಸಿದ್ದಾರೆ. ಈ ಮೂಲಕ ಪರಿಣತ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 37 ವರ್ಷಗಳ ಸೇವೆಯಲ್ಲಿ ಹಲವಾರು ಅತ್ಯುನ್ನತ ಪ್ರಶಸ್ತಿ, ಪದಕಗಳನ್ನು ಧನೋವಾ ಪಡೆದಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

15 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

15 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

17 hours ago