Featured

ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ವಾಯುಸೇನೆಯ ಮುಖ್ಯಸ್ಥರಾದ ಮೈಂಡ್ ಬೀರೇಂದ್ರ ಸಿಂಗ್ ಧನೋವಾ – Vishwanews24

ನವದೆಹಲಿ: ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್ ವಾಯುಸೇನೆಯ ಮುಖ್ಯಸ್ಥರಾದ ಬೀರೇಂದ್ರ ಸಿಂಗ್ ಧನೋವಾ. ಸೆಪ್ಟೆಂಬರ್ 7, 1957ರಲ್ಲಿ ಜನಿಸಿದ ಧನೋವಾ ಅವರು ಸೇನಾಪಡೆಯಲ್ಲಿ 37 ವರ್ಷಗಳಿಂದ ಭಾರತದ ವಾಯು ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದಲ್ಲದೇ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿದ್ದ ಧನೋವಾ ಅವರೇ ಏರ್ ಸ್ಟ್ರೈಕ್‍ಗೆ ಸೂಚಿಸಿದ್ದರಂತೆ. ಪುಲ್ವಾಮಾದ ಆವಂತಿಪೋರ್ ನಲ್ಲಿ ನಡೆದ ದಾಳಿಗೆ ಸಂಬಂಧಪಟ್ಟಂತೆ ನಡೆದ ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರ ಸಭೆಯಲ್ಲಿ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋವಾ ಸಲಹೆ ನೀಡಿದ್ದರು ಅದು ಈಗ ಯಶಸ್ವಿಯಾಗಿದೆ.

ಧನೋವಾ ಅವರು 1999ರ ಕಾರ್ಗಿಲ್ ಯುದ್ಧದ ವೇಳೆ ಫೈಟರ್ ಸ್ಕ್ವಾಡ್ರನ್ ಮತ್ತು ಅಂದಿನ ಏರ್ ಫೋರ್ಸ್ ಮುಖ್ಯಸ್ಥರಾಗಿದ್ದ ಎ.ವೈ ಟಿಪ್ನಿಸ್ ಅವರಿಗೆ ಸಾಥ್ ನೀಡಿದ್ದರು. ಅಂದಿನ ಮಾರ್ಷಲ್ ಟಿಫ್ನಿಸ್ ಅವರೇ ಖುದ್ದಾಗಿ ಪೈಲಟ್‍ಗಳ ಜೊತೆಗೆ ತೆರಳಿ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ ಆಪರೇಷನ್ ನಡೆಸಿ ಯಶಸ್ವಿಯಾದರು. ಪಾಕಿಸ್ತಾನದ ನೆಲಕ್ಕೆ ನುಗ್ಗಿ ಬಾಲ್‍ಕೋಟ್‍ನಲ್ಲಿ 350 ಉಗ್ರರ ಚೆಂಡಾಡಿದ ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್. ಅಲ್ಲದೆ, ಈ ಸಂಪೂರ್ಣ ಆಪರೇಷನ್ ನಿರ್ವಹಿಸಿದವರು .

ಘಟನೆ ಬಳಿಕ ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೂಸೇನೆ, ವಾಯುಸೇನೆ, ನೌಕಾಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ವೇಳೆ ಪಾಕ್ ಉಗ್ರರ ಹುಟ್ಟಡಗಿಸಲು ಏರ್ ಸ್ಟ್ರೈಕ್ ಒಳ್ಳೆಯ ಆಯ್ಕೆ ಅಂತ ಧನೋಆ ಸಲಹೆ ನೀಡಿದ್ದರು ಅಂತ ತಿಳಿದು ಬಂದಿದೆ.

1978ರಲ್ಲಿ ವಾಯು ಸೇನೆ ಸೇರಿದ್ದ ಧನೋವಾ, ಎಚ್‍ಜೆಟಿ-16 ಕಿರಣ್, ಸೆಪೆಕ್ಯಾಟ್, ಜಾಗ್ವಾರ್, ಮಿಗ್-29 ಹಾಗೂ ಸುಖೋಯ್-30 ಎಂಕೆಐ ಫೈಟರ್ ಜೆಟ್‍ಗಳನ್ನು ಹಾರಿಸಿದ್ದಾರೆ. ಈ ಮೂಲಕ ಪರಿಣತ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 37 ವರ್ಷಗಳ ಸೇವೆಯಲ್ಲಿ ಹಲವಾರು ಅತ್ಯುನ್ನತ ಪ್ರಶಸ್ತಿ, ಪದಕಗಳನ್ನು ಧನೋವಾ ಪಡೆದಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

9 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

9 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

10 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

10 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

10 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

10 hours ago