Featured

ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ  ಮೊದಲ ಸ್ಥಾನ ಪಡೆದಿದ ಬಾಲಿವುಡ್ ನಟ ಸೋನು ಸೂದ್  -Vishwanews24

ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ  ಮೊದಲ ಸ್ಥಾನ ಪಡೆದಿದ ಬಾಲಿವುಡ್ ನಟ ಸೋನು ಸೂದ್  -Vishwanews24

ಮುಂಬೈ: ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿ ರಿಲೀಸ್ ಆಗಿದ್ದು, ಬಾಲಿವುಡ್ ನಟ ಸೋನು ಸೂದ್ ಮೊದಲ ಸ್ಥಾನ ಪಡೆದಿದ್ದಾರೆ.

ಬ್ರಿಟನ್ ನ ‘ಈಸ್ಟರ್ನ್ ಐ’ ನಿಯತಕಾಲಿಕೆ ಪ್ರಕಟಿಸಿರುವ ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಸೆಲೆಬ್ರಿಟಿಗಳು ಸ್ಥಾನ ಪಡೆದಿದ್ದಾರೆ. ಸೋನು ಸೂದ್ ಮೊದಲ ಸ್ಥಾನದಲ್ಲಿದ್ದರೆ, ಭಾರತೀಯ ಮೂಲದ ಲಿಲ್ಲಿ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.

ಸಿನಿಮಾ ಮಾತ್ರವಲ್ಲ, ಲಾಕ್‍ಡೌನ್ ಬಳೀಕದ ಮಾನವೀಯ ಕಾರ್ಯಕ್ರಗಳಿಂದ ಜನರ ಮೆಚ್ಚುಗೆಗೆ ಪಾತ್ರರಾಗಿರುವ ಸೋನ್ ಸೂದ್ ಇದೀಗ ಏಷ್ಯಾದ ನಂಬರ್ 1 ಸೆಲೆಬ್ರಿಟಿ ಆಗಿದ್ದಾರೆ. ಈ ಕುರಿತು ಈಸ್ಟರ್ನ್ ಐ ನ ಸಂಪಾದಕ ಅಜರ್ ನಜೀರ್, ಏಷ್ಯಾದ ನಂಬರ್ 1 ಸೆಲೆಬ್ರಿಟಿ ಸ್ಥಾನಕ್ಕೆ ಸೋನು ಸೂದ್ ಅರ್ಹ ವ್ಯಕ್ತಿ. ಕೊರೊನಾ ಸಮಯದಲ್ಲಿ ಅವರು ಮಾಡಿದ್ದಷ್ಟು ಸಹಾಯ ಬೇರೆ ಯಾವ ಸೆಲೆಬ್ರಿಟಿ ಕೂಡ ಮಾಡಿಲ್ಲ ಎಂದು ಬಣ್ಣಿಸಿದ್ದಾರೆ.

ಸೂನ್ ಸೂದ್ ಅವರು ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಕಾರ್ಮಿಕರನ್ನು ಊರಿಗೆ ಕಳುಹಿಸುವುದು, ಬಡವರಿಗೆ ಹಣಕಾಸು, ವಿದ್ಯಾರ್ಥಿಗಳಿಗೆ ಸಹಾಯ, ಶಸ್ತ್ರಚಿಕಿತ್ಸೆಗಳಿಗೆ ಹಣಕಾಸು, ರೈತರಿಗೆ ಸಹಾಯ, ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಹೀಗೆ ಹಲವಾರು ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬ್ರಿಟನ್‍ನ ‘ಜಿನ್ ಹೆರ್ಶೋಲ್ಟ್ ಹ್ಯುಮೆನಿಟೇರಿಯನ್’ ಪ್ರಶಸ್ತಿ ನೀಡಬೇಕು ಎಂದು ಹೇಳಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಯೂಟ್ಯೂಬರ್ ಲಿಲ್ಲಿ ಸಿಂಗ್ ಭಾರೀ ಜನಪ್ರಿಯರಾಗಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಹಲವು ದೇಶಗಳಲ್ಲಿ ತಮ್ಮದೇ ಆದ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

5 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 hours ago