Featured

ಏಷ್ಯಾ ಕಪ್: ಪಂದ್ಯ ರೋಚಕ ಟೈನಲ್ಲಿ ಅಂತ್ಯವಾದ ಭಾರತ–ಅಫ್ಘಾನಿಸ್ತಾನ

ದುಬೈ: ಅಸಾಂಪ್ರಾದಾಯಿಕ ಹೊಡೆತಗಳ ಬ್ಯಾಟಿಂಗ್‌ ಶೈಲಿಯ ಮೂಲಕ ರಂಜಿಸಿದ ಅಫ್ಗಾನಿಸ್ತಾನದ ಮೊಹಮ್ಮದ್ ಶೆಹಜಾದ್ ಅವರು ಮಂಗಳವಾರ ಭಾರತದ ಬೌಲರ್‌ಗಳ ಬೆವರಿಳಿಸಿದರು.

ಏಷ್ಯಾ ಕಪ್ ಏಕದಿನ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಪಂದ್ಯದಲ್ಲಿ ಶೆಹಜಾದ್ (124; 116ಎ, 11ಬೌಂಡರಿ, 7ಸಿಕ್ಸರ್) ಅಮೋಘ ಶತಕದ ಬಲದಿಂದ ಅಫ್ಗಾನಿಸ್ತಾನ ತಂಡವು 50 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 252 ರನ್‌ ಗಳಿಸಿತ್ತು. ಗುರಿ ಬೆನ್ನತ್ತಿದ ಭಾರತವೂ ಇಷ್ಟೇ ರನ್‌ಗಳಿಸಿ ಆಲೌಟ್‌ ಆಯಿತು.

ಭಾರತ ಈಗಾಗಲೇ ಫೈನಲ್‌ ಪ್ರವೇಶಿಸಿದ್ದು, ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್‌ಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಮಹೇಂದ್ರಸಿಂಗ್ ಧೋನಿ ತಂಡದ ಸಾರಥ್ಯ ವಹಿಸಿದ್ದರು.

ಭಾರತ ಪರ ಇನಿಂಗ್ಸ್‌ ಆರಂಭಿಸಿದ್ದ ಕನ್ನಡಿಗ ಕೆ.ಎಲ್. ರಾಹುಲ್(60) ಮತ್ತು ಅಂಬಟಿ ರಾಯುಡು(57) ಶತಕದ ಜೊತೆಯಾಟವಾಡಿದರು. ಉಳಿದವರಿಂದ ಸಾಮರ್ಥ್ಯಕ್ಕೆ ತಕ್ಕ ಆಟ ಮೂಡಿಬರಲಿಲ್ಲ. ತಂಡದ ಗೆಲುವಿಗೆ ಕೊನೆಯ ಓವರ್‌ನಲ್ಲಿ ಏಳು ರನ್‌ ಅಗತ್ಯವಿತ್ತು. ರವೀಂದ್ರ ಜಡೇಜಾ ಹಾಗೂ ಖಲೀಲ್ ಅಹಮದ್‌ ಕ್ರೀಸ್‌ನಲ್ಲಿದ್ದರು.

ಅಫ್ಘಾನಿಸ್ತಾನ ಪರ ಕೊನೆಯ ಓವರ್‌ ಎಸೆದ ರಶೀದ್‌ ಖಾನ್‌, ಅಂತಿಮ ವಿಕೆಟ್‌ ರೂಪದಲ್ಲಿ ಜಡೇಜಾಗೆ ಪೆವಿಲಿಯನ್‌ ಹಾದಿ ತೋರಿದರು. ಎರಡು ಎಸೆತಗಳಲ್ಲಿ ಕೇವಲ ಒಂದು ರನ್‌ ಗಳಿಸ ಬೇಕಿದ್ದ ವೇಳೆ ಗೊಂದಲಕ್ಕೊಳಗಾದ ಜಡೇಜಾ, ನಜೀಬುಲ್ಲಾಗೆ ಕ್ಯಾಚ್‌ ನೀಡಿ ನಿರ್ಗಮಸಿದರು. ಇದರೊಂದಿಗೆ ಪಂದ್ಯ ರೋಚಕ ‘ಟೈ’ನೊಂದಿಗೆ ಮುಕ್ತಾಯವಾಯಿತು.

ಪಂದ್ಯವಾಳಿಯುದ್ದಕ್ಕೂ ಉತ್ತಮವಾಗಿ ಆಡಿ ಅಭಿಮಾನಿಗಳ ಮನ ಗೆದ್ದಿರುವ ಅಫ್ಗಾನಿಸ್ತಾನ ತಂಡವು ಭಾರತ ತಂಡಕ್ಕೂ ದಿಟ್ಟ ಸವಾಲು ಒಡ್ಡಿತು.

ಕ್ರಾಸ್‌ ಬ್ಯಾಟ್‌’ ಮಿಂಚು

ಆರಂಭಿಕ ಬ್ಯಾಟ್ಸ್‌ಮನ್ ಶೆಹಜಾದ್ ತಮಗೆ ಲಭಿಸಿದ ಒಂದು ಜೀವದಾನದ ಲಾಭ ಪಡೆದರು. ‘ಕ್ರಾಸ್‌ ಬ್ಯಾಟ್‌’ ಹೊಡೆತಗಳ ಮೂಲಕ ಬೌಲರ್‌ಗಳ ಲಯ ತಪ್ಪಿಸಿದರು.

ಇನ್ನೊಂದು ಬದಿಯಲ್ಲಿ ವಿಕೆಟ್‌ಗಳು ಉದುರುತ್ತಿದ್ದರೂ ಶೆಹಜಾದ್ ಅಂಜದೆ, ಅಳುಕದೇ ಬ್ಯಾಟ್ ಬೀಸಿದರು. ಏಳು ಅಮೋಘ ಸಿಕ್ಸರ್‌ಗಳನ್ನು ಬಾರಿಸಿದರು.

ಅಂತಿಮ ಓವರ್‌ಗಳಲ್ಲಿ ಮೊಹಮ್ಮದ್ ನೈಬಿ ಕೂಡ ಮಿಂಚಿದರು. ಅವರು ಮಿಂಚಿನ ಅರ್ಧಶತಕ ಹೊಡೆದು ತಂಡವು ಹೋರಾಟದ ಮೊತ್ತ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಭಾರತದ ರವೀಂದ್ರ ಜಡೇಜ ಮೂರು ಮತ್ತು ಕುಲದೀಪ್ ಯಾದವ್ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಎಡಗೈ ಮಧ್ಯಮವೇಗಿ ಖಲೀಲ್ ಅಹಮದ್ ಒಂದು ವಿಕೆಟ್ ಗಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago