Featured

ಏಷ್ಯಾ ಕಪ್: ಪಂದ್ಯ ರೋಚಕ ಟೈನಲ್ಲಿ ಅಂತ್ಯವಾದ ಭಾರತ–ಅಫ್ಘಾನಿಸ್ತಾನ

ದುಬೈ: ಅಸಾಂಪ್ರಾದಾಯಿಕ ಹೊಡೆತಗಳ ಬ್ಯಾಟಿಂಗ್‌ ಶೈಲಿಯ ಮೂಲಕ ರಂಜಿಸಿದ ಅಫ್ಗಾನಿಸ್ತಾನದ ಮೊಹಮ್ಮದ್ ಶೆಹಜಾದ್ ಅವರು ಮಂಗಳವಾರ ಭಾರತದ ಬೌಲರ್‌ಗಳ ಬೆವರಿಳಿಸಿದರು.

ಏಷ್ಯಾ ಕಪ್ ಏಕದಿನ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಪಂದ್ಯದಲ್ಲಿ ಶೆಹಜಾದ್ (124; 116ಎ, 11ಬೌಂಡರಿ, 7ಸಿಕ್ಸರ್) ಅಮೋಘ ಶತಕದ ಬಲದಿಂದ ಅಫ್ಗಾನಿಸ್ತಾನ ತಂಡವು 50 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 252 ರನ್‌ ಗಳಿಸಿತ್ತು. ಗುರಿ ಬೆನ್ನತ್ತಿದ ಭಾರತವೂ ಇಷ್ಟೇ ರನ್‌ಗಳಿಸಿ ಆಲೌಟ್‌ ಆಯಿತು.

ಭಾರತ ಈಗಾಗಲೇ ಫೈನಲ್‌ ಪ್ರವೇಶಿಸಿದ್ದು, ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್‌ಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಮಹೇಂದ್ರಸಿಂಗ್ ಧೋನಿ ತಂಡದ ಸಾರಥ್ಯ ವಹಿಸಿದ್ದರು.

ಭಾರತ ಪರ ಇನಿಂಗ್ಸ್‌ ಆರಂಭಿಸಿದ್ದ ಕನ್ನಡಿಗ ಕೆ.ಎಲ್. ರಾಹುಲ್(60) ಮತ್ತು ಅಂಬಟಿ ರಾಯುಡು(57) ಶತಕದ ಜೊತೆಯಾಟವಾಡಿದರು. ಉಳಿದವರಿಂದ ಸಾಮರ್ಥ್ಯಕ್ಕೆ ತಕ್ಕ ಆಟ ಮೂಡಿಬರಲಿಲ್ಲ. ತಂಡದ ಗೆಲುವಿಗೆ ಕೊನೆಯ ಓವರ್‌ನಲ್ಲಿ ಏಳು ರನ್‌ ಅಗತ್ಯವಿತ್ತು. ರವೀಂದ್ರ ಜಡೇಜಾ ಹಾಗೂ ಖಲೀಲ್ ಅಹಮದ್‌ ಕ್ರೀಸ್‌ನಲ್ಲಿದ್ದರು.

ಅಫ್ಘಾನಿಸ್ತಾನ ಪರ ಕೊನೆಯ ಓವರ್‌ ಎಸೆದ ರಶೀದ್‌ ಖಾನ್‌, ಅಂತಿಮ ವಿಕೆಟ್‌ ರೂಪದಲ್ಲಿ ಜಡೇಜಾಗೆ ಪೆವಿಲಿಯನ್‌ ಹಾದಿ ತೋರಿದರು. ಎರಡು ಎಸೆತಗಳಲ್ಲಿ ಕೇವಲ ಒಂದು ರನ್‌ ಗಳಿಸ ಬೇಕಿದ್ದ ವೇಳೆ ಗೊಂದಲಕ್ಕೊಳಗಾದ ಜಡೇಜಾ, ನಜೀಬುಲ್ಲಾಗೆ ಕ್ಯಾಚ್‌ ನೀಡಿ ನಿರ್ಗಮಸಿದರು. ಇದರೊಂದಿಗೆ ಪಂದ್ಯ ರೋಚಕ ‘ಟೈ’ನೊಂದಿಗೆ ಮುಕ್ತಾಯವಾಯಿತು.

ಪಂದ್ಯವಾಳಿಯುದ್ದಕ್ಕೂ ಉತ್ತಮವಾಗಿ ಆಡಿ ಅಭಿಮಾನಿಗಳ ಮನ ಗೆದ್ದಿರುವ ಅಫ್ಗಾನಿಸ್ತಾನ ತಂಡವು ಭಾರತ ತಂಡಕ್ಕೂ ದಿಟ್ಟ ಸವಾಲು ಒಡ್ಡಿತು.

ಕ್ರಾಸ್‌ ಬ್ಯಾಟ್‌’ ಮಿಂಚು

ಆರಂಭಿಕ ಬ್ಯಾಟ್ಸ್‌ಮನ್ ಶೆಹಜಾದ್ ತಮಗೆ ಲಭಿಸಿದ ಒಂದು ಜೀವದಾನದ ಲಾಭ ಪಡೆದರು. ‘ಕ್ರಾಸ್‌ ಬ್ಯಾಟ್‌’ ಹೊಡೆತಗಳ ಮೂಲಕ ಬೌಲರ್‌ಗಳ ಲಯ ತಪ್ಪಿಸಿದರು.

ಇನ್ನೊಂದು ಬದಿಯಲ್ಲಿ ವಿಕೆಟ್‌ಗಳು ಉದುರುತ್ತಿದ್ದರೂ ಶೆಹಜಾದ್ ಅಂಜದೆ, ಅಳುಕದೇ ಬ್ಯಾಟ್ ಬೀಸಿದರು. ಏಳು ಅಮೋಘ ಸಿಕ್ಸರ್‌ಗಳನ್ನು ಬಾರಿಸಿದರು.

ಅಂತಿಮ ಓವರ್‌ಗಳಲ್ಲಿ ಮೊಹಮ್ಮದ್ ನೈಬಿ ಕೂಡ ಮಿಂಚಿದರು. ಅವರು ಮಿಂಚಿನ ಅರ್ಧಶತಕ ಹೊಡೆದು ತಂಡವು ಹೋರಾಟದ ಮೊತ್ತ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಭಾರತದ ರವೀಂದ್ರ ಜಡೇಜ ಮೂರು ಮತ್ತು ಕುಲದೀಪ್ ಯಾದವ್ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಎಡಗೈ ಮಧ್ಯಮವೇಗಿ ಖಲೀಲ್ ಅಹಮದ್ ಒಂದು ವಿಕೆಟ್ ಗಳಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago