Featured

ಏಷ್ಯಾ ಕಪ್ : ಬಾಂಗ್ಲಾ ವಿರುದ್ಧ ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ

ದುಬೈ: ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್ ಹಣಾಹಣಿಯಲ್ಲಿ   ಬಾಂಗ್ಲಾದೇಶವನ್ನು  ರೋಚಕ ರೀತಿಯಲ್ಲಿ   ಮೂರು ವಿಕೆಟ್ ಗಳ ಅಂತರದಿಂದ ಮಣಿಸಿದ  ಭಾರತ  ದಾಖಲೆಯ ಏಳನೇ ಏಷ್ಯಾಕಪ್ ಪ್ರಶಸ್ತಿಯನ್ನು  ಮುಡಿಗೇರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಬಾಂಗ್ಲಾ ಬಲಗೈ ಬ್ಯಾಟ್ಸ್ ಮನ್, ಪ್ರಾರಂಭಿಕ ಆಟಗಾರ  ಲಿಟನ್ ದಾಸ್ ಶತಕದ ನೆರವಿನಿಂದ  48.3 ಓವರ್‌ ಗಳಲ್ಲಿ 222  ರನ್ ಕಲೆ ಹಾಕಿತು. ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 223 ರನ್ ಪಡೆದು ವಿಜಯದ ನಗೆ ಚೆಲ್ಲಿತು.

ಕೊನೆಯ ಓವರ್ ಅಂತೂ ಸಾಕಷ್ಟು ರೋಚಕತೆಗೆ ಸಾಕ್ಷಿಯಾಯಿತು. 6 ಎಸೆತಗಳಲ್ಲಿ 6 ರನ್ ಗಳಿಸಬೇಕಾಗಿತ್ತು. ಕೆಎಂ ಜಾದವ್  ಮತ್ತು ಕುಲದೀಪ್ ಯಾದವ್  ಜೋಡಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಯಿತು. ಒಂದು ಎಸೆತಕ್ಕೆ ಒಂದು ರನ್ ಗಳಿಸಬೇಕಾದ ಸಂದಿಗ್ಧತೆಯ ಸಂದರ್ಭದಲ್ಲಿ ಈ ಜೋಡಿ ತಾಳ್ಮೆ ಆಟವಾಡಿ ಟೀಂ ಇಂಡಿಯಾ ಗೆಲ್ಲಲು ನೆರವಾಯಿತು.

ಭಾರತದ ಪರ ರೋಹಿತ್ ಶರ್ಮಾ 48, ಶಿಖರ್ ಧವನ್, 15, ಅಂಬಟ್ಟಿ ರಾಯುಡು 2, ದೋನಿ  36 , ರವೀಂದ್ರ ಜಡೇಜಾ 23  ರನ್ ಗಳಿಸಿದರು. ಬಾಂಗ್ಲಾದೇಶ ಪರ  ಮುಸ್ತಪಿಝರ್ ರೆಹಮಾನ್ , ನಜ್ಮುಲ್  ಇಸ್ಲಾಂ,  ಮೊರ್ಟೇಜಾ, ರುಬೆಲ್ ಹುಸೇನ್,  ಹಾಗೂ ಮಹಮ್ಮದುಲ್ಲಾ  ತಲಾ 1 ವಿಕೆಟ್ ಪಡೆದುಕೊಂಡರು.

ಇದಕ್ಕೂ ಮುನ್ನ  ಬ್ಯಾಟಿಂಗ್ ಮಾಡಿದ ಬಾಂಗ್ಲಾ ಪರವಾಗಿ ಲಿಟನ್ ದಾಸ್ 12 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 121 ರನ್ ಗಳಿಸಿ ಅದ್ಭುತ ಪ್ರದರ್ಶನ ನೀಡಿದ್ದರು. ಮೆಹಿದಿ ಹಸನ್ (32), ಸೌಮ್ಯ ಸರ್ಕಾರ್ (33) ರನ್ ಕಲೆಹಾಕಿದ್ದರು. ಇದರ ಹೊರತಾಗಿ ಮತ್ತಾರೂ ಎರಡಂಕಿ ಸಹ ತಲುಪುವುದಕ್ಕೆ ವಿಫಲರಾದರೆನ್ನುವುದು ಗಮನಾರ್ಹ.

ಭಾರತದ ಪರ ಕುಲದೀಪ್ ಯಾದವ್ 3,  ಕೇದಾರ್ ಜಾಧವ್ 2 ಹಾಗೂ ಬುಮ್ರಾ ಹಾಗೂ ಚಹಾಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

17 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago