Featured

ಏಷ್ಯಾ ಕಪ್ : ಬಾಂಗ್ಲಾ ವಿರುದ್ಧ ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ

ದುಬೈ: ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್ ಹಣಾಹಣಿಯಲ್ಲಿ   ಬಾಂಗ್ಲಾದೇಶವನ್ನು  ರೋಚಕ ರೀತಿಯಲ್ಲಿ   ಮೂರು ವಿಕೆಟ್ ಗಳ ಅಂತರದಿಂದ ಮಣಿಸಿದ  ಭಾರತ  ದಾಖಲೆಯ ಏಳನೇ ಏಷ್ಯಾಕಪ್ ಪ್ರಶಸ್ತಿಯನ್ನು  ಮುಡಿಗೇರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಬಾಂಗ್ಲಾ ಬಲಗೈ ಬ್ಯಾಟ್ಸ್ ಮನ್, ಪ್ರಾರಂಭಿಕ ಆಟಗಾರ  ಲಿಟನ್ ದಾಸ್ ಶತಕದ ನೆರವಿನಿಂದ  48.3 ಓವರ್‌ ಗಳಲ್ಲಿ 222  ರನ್ ಕಲೆ ಹಾಕಿತು. ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 223 ರನ್ ಪಡೆದು ವಿಜಯದ ನಗೆ ಚೆಲ್ಲಿತು.

ಕೊನೆಯ ಓವರ್ ಅಂತೂ ಸಾಕಷ್ಟು ರೋಚಕತೆಗೆ ಸಾಕ್ಷಿಯಾಯಿತು. 6 ಎಸೆತಗಳಲ್ಲಿ 6 ರನ್ ಗಳಿಸಬೇಕಾಗಿತ್ತು. ಕೆಎಂ ಜಾದವ್  ಮತ್ತು ಕುಲದೀಪ್ ಯಾದವ್  ಜೋಡಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಯಿತು. ಒಂದು ಎಸೆತಕ್ಕೆ ಒಂದು ರನ್ ಗಳಿಸಬೇಕಾದ ಸಂದಿಗ್ಧತೆಯ ಸಂದರ್ಭದಲ್ಲಿ ಈ ಜೋಡಿ ತಾಳ್ಮೆ ಆಟವಾಡಿ ಟೀಂ ಇಂಡಿಯಾ ಗೆಲ್ಲಲು ನೆರವಾಯಿತು.

ಭಾರತದ ಪರ ರೋಹಿತ್ ಶರ್ಮಾ 48, ಶಿಖರ್ ಧವನ್, 15, ಅಂಬಟ್ಟಿ ರಾಯುಡು 2, ದೋನಿ  36 , ರವೀಂದ್ರ ಜಡೇಜಾ 23  ರನ್ ಗಳಿಸಿದರು. ಬಾಂಗ್ಲಾದೇಶ ಪರ  ಮುಸ್ತಪಿಝರ್ ರೆಹಮಾನ್ , ನಜ್ಮುಲ್  ಇಸ್ಲಾಂ,  ಮೊರ್ಟೇಜಾ, ರುಬೆಲ್ ಹುಸೇನ್,  ಹಾಗೂ ಮಹಮ್ಮದುಲ್ಲಾ  ತಲಾ 1 ವಿಕೆಟ್ ಪಡೆದುಕೊಂಡರು.

ಇದಕ್ಕೂ ಮುನ್ನ  ಬ್ಯಾಟಿಂಗ್ ಮಾಡಿದ ಬಾಂಗ್ಲಾ ಪರವಾಗಿ ಲಿಟನ್ ದಾಸ್ 12 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 121 ರನ್ ಗಳಿಸಿ ಅದ್ಭುತ ಪ್ರದರ್ಶನ ನೀಡಿದ್ದರು. ಮೆಹಿದಿ ಹಸನ್ (32), ಸೌಮ್ಯ ಸರ್ಕಾರ್ (33) ರನ್ ಕಲೆಹಾಕಿದ್ದರು. ಇದರ ಹೊರತಾಗಿ ಮತ್ತಾರೂ ಎರಡಂಕಿ ಸಹ ತಲುಪುವುದಕ್ಕೆ ವಿಫಲರಾದರೆನ್ನುವುದು ಗಮನಾರ್ಹ.

ಭಾರತದ ಪರ ಕುಲದೀಪ್ ಯಾದವ್ 3,  ಕೇದಾರ್ ಜಾಧವ್ 2 ಹಾಗೂ ಬುಮ್ರಾ ಹಾಗೂ ಚಹಾಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago