Featured

ಏಷ್ಯಾ ಕಪ್ : ಬಾಂಗ್ಲಾ ವಿರುದ್ಧ ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ

ದುಬೈ: ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್ ಹಣಾಹಣಿಯಲ್ಲಿ   ಬಾಂಗ್ಲಾದೇಶವನ್ನು  ರೋಚಕ ರೀತಿಯಲ್ಲಿ   ಮೂರು ವಿಕೆಟ್ ಗಳ ಅಂತರದಿಂದ ಮಣಿಸಿದ  ಭಾರತ  ದಾಖಲೆಯ ಏಳನೇ ಏಷ್ಯಾಕಪ್ ಪ್ರಶಸ್ತಿಯನ್ನು  ಮುಡಿಗೇರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಬಾಂಗ್ಲಾ ಬಲಗೈ ಬ್ಯಾಟ್ಸ್ ಮನ್, ಪ್ರಾರಂಭಿಕ ಆಟಗಾರ  ಲಿಟನ್ ದಾಸ್ ಶತಕದ ನೆರವಿನಿಂದ  48.3 ಓವರ್‌ ಗಳಲ್ಲಿ 222  ರನ್ ಕಲೆ ಹಾಕಿತು. ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 223 ರನ್ ಪಡೆದು ವಿಜಯದ ನಗೆ ಚೆಲ್ಲಿತು.

ಕೊನೆಯ ಓವರ್ ಅಂತೂ ಸಾಕಷ್ಟು ರೋಚಕತೆಗೆ ಸಾಕ್ಷಿಯಾಯಿತು. 6 ಎಸೆತಗಳಲ್ಲಿ 6 ರನ್ ಗಳಿಸಬೇಕಾಗಿತ್ತು. ಕೆಎಂ ಜಾದವ್  ಮತ್ತು ಕುಲದೀಪ್ ಯಾದವ್  ಜೋಡಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಯಿತು. ಒಂದು ಎಸೆತಕ್ಕೆ ಒಂದು ರನ್ ಗಳಿಸಬೇಕಾದ ಸಂದಿಗ್ಧತೆಯ ಸಂದರ್ಭದಲ್ಲಿ ಈ ಜೋಡಿ ತಾಳ್ಮೆ ಆಟವಾಡಿ ಟೀಂ ಇಂಡಿಯಾ ಗೆಲ್ಲಲು ನೆರವಾಯಿತು.

ಭಾರತದ ಪರ ರೋಹಿತ್ ಶರ್ಮಾ 48, ಶಿಖರ್ ಧವನ್, 15, ಅಂಬಟ್ಟಿ ರಾಯುಡು 2, ದೋನಿ  36 , ರವೀಂದ್ರ ಜಡೇಜಾ 23  ರನ್ ಗಳಿಸಿದರು. ಬಾಂಗ್ಲಾದೇಶ ಪರ  ಮುಸ್ತಪಿಝರ್ ರೆಹಮಾನ್ , ನಜ್ಮುಲ್  ಇಸ್ಲಾಂ,  ಮೊರ್ಟೇಜಾ, ರುಬೆಲ್ ಹುಸೇನ್,  ಹಾಗೂ ಮಹಮ್ಮದುಲ್ಲಾ  ತಲಾ 1 ವಿಕೆಟ್ ಪಡೆದುಕೊಂಡರು.

ಇದಕ್ಕೂ ಮುನ್ನ  ಬ್ಯಾಟಿಂಗ್ ಮಾಡಿದ ಬಾಂಗ್ಲಾ ಪರವಾಗಿ ಲಿಟನ್ ದಾಸ್ 12 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 121 ರನ್ ಗಳಿಸಿ ಅದ್ಭುತ ಪ್ರದರ್ಶನ ನೀಡಿದ್ದರು. ಮೆಹಿದಿ ಹಸನ್ (32), ಸೌಮ್ಯ ಸರ್ಕಾರ್ (33) ರನ್ ಕಲೆಹಾಕಿದ್ದರು. ಇದರ ಹೊರತಾಗಿ ಮತ್ತಾರೂ ಎರಡಂಕಿ ಸಹ ತಲುಪುವುದಕ್ಕೆ ವಿಫಲರಾದರೆನ್ನುವುದು ಗಮನಾರ್ಹ.

ಭಾರತದ ಪರ ಕುಲದೀಪ್ ಯಾದವ್ 3,  ಕೇದಾರ್ ಜಾಧವ್ 2 ಹಾಗೂ ಬುಮ್ರಾ ಹಾಗೂ ಚಹಾಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago