ಕಪಾಲಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾವು ಅವಕಾಶ ಕೊಡುವುದಿಲ್ಲ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಬೆಂಗಳೂರು : ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ನೂರಾರು ಕಾರ್ಯಕರ್ತರು ಕನಕಪುರ ಅಯ್ಯಪ್ಪಸ್ವಾಮಿ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ಪ್ರತಿಭಟನೆ ನಡೆಸಿದರು.

ರಾಮನಗರದ ಜಿಲ್ಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಅತೀ ಎತ್ತರದ ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಸೋಮವಾರ ಹಿಂದೂ ಜಾಗರಣ ವೇದಿಕೆ ಕನಕಪುರ ಚಲೋ ಮೂಲಕ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದ ಪ್ರಭಾಕರ್ ಭಟ್, “ನಾವು ಶಾಂತಿ ಕದಡಲು ಬಂದಿಲ್ಲ. ನಾವು ಬಲಿದಾನಕ್ಕೂ ಸಿದ್ದರಿದ್ದೇವೆ. ಸಂಸ್ಕೃತಿಗೆ ಕಲ್ಲು ಹಾಕಲು ಹೊರಟವರಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಹೊರಟಿದ್ದೀರಿ. ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡುವ ಬದಲು ಪೇಜಾವರಶ್ರೀಗಳ ಪ್ರತಿಮೆ ನಿರ್ಮಾಣ ಮಾಡಿ. ದೇಶದಲ್ಲಿರುವ ಹಿಂದೂಗಳ ಜಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೇವೆ” ಎಂದು ಹೇಳಿದರು.

“ಡಿ.ಕೆ ಶಿವಕುಮಾರ್‌ ಅವರೇ ನಾನು ಯಾರೆಂದು ನಿಮಗೆ ಗೊತ್ತಿಲ್ಲವೇ. ನಾನು ಶ್ರೀರಾಮುಲು ಮಗಳ ಮದುವೆಯಲ್ಲಿ ನಿಮ್ಮನ್ನು ಭೇಟಿಯಾಗಿದ್ದೆ. ಸುಳ್ಳು, ಮೋಸ ವಂಚನೆಯಿಂದ ಎಷ್ಟು ದಿನ ಇರುತ್ತೀರಾ. ವೋಟ್ ಬ್ಯಾಂಕ್‌ಗಾಗಿ ಏಸು ಪ್ರತಿಮೆ ನಿರ್ಮಾಣಕ್ಕೆ ಹೊರಟಿದ್ದೀರಾ. ಅಮೆರಿಕ, ಇಂಗ್ಲೆಂಡ್‌ನಲ್ಲಿ ಬೇಕಾದರೆ ಪ್ರತಿಮೆ ನಿರ್ಮಾಣ ಮಾಡಿ. ಆದರೆ ಇಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾವು ಅವಕಾಶ ಕೊಡುವುದಿಲ್ಲ” ಎಂದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago