ಕಪಾಲಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾವು ಅವಕಾಶ ಕೊಡುವುದಿಲ್ಲ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಬೆಂಗಳೂರು : ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ನೂರಾರು ಕಾರ್ಯಕರ್ತರು ಕನಕಪುರ ಅಯ್ಯಪ್ಪಸ್ವಾಮಿ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ಪ್ರತಿಭಟನೆ ನಡೆಸಿದರು.

ರಾಮನಗರದ ಜಿಲ್ಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಅತೀ ಎತ್ತರದ ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಸೋಮವಾರ ಹಿಂದೂ ಜಾಗರಣ ವೇದಿಕೆ ಕನಕಪುರ ಚಲೋ ಮೂಲಕ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದ ಪ್ರಭಾಕರ್ ಭಟ್, “ನಾವು ಶಾಂತಿ ಕದಡಲು ಬಂದಿಲ್ಲ. ನಾವು ಬಲಿದಾನಕ್ಕೂ ಸಿದ್ದರಿದ್ದೇವೆ. ಸಂಸ್ಕೃತಿಗೆ ಕಲ್ಲು ಹಾಕಲು ಹೊರಟವರಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಹೊರಟಿದ್ದೀರಿ. ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡುವ ಬದಲು ಪೇಜಾವರಶ್ರೀಗಳ ಪ್ರತಿಮೆ ನಿರ್ಮಾಣ ಮಾಡಿ. ದೇಶದಲ್ಲಿರುವ ಹಿಂದೂಗಳ ಜಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೇವೆ” ಎಂದು ಹೇಳಿದರು.

“ಡಿ.ಕೆ ಶಿವಕುಮಾರ್‌ ಅವರೇ ನಾನು ಯಾರೆಂದು ನಿಮಗೆ ಗೊತ್ತಿಲ್ಲವೇ. ನಾನು ಶ್ರೀರಾಮುಲು ಮಗಳ ಮದುವೆಯಲ್ಲಿ ನಿಮ್ಮನ್ನು ಭೇಟಿಯಾಗಿದ್ದೆ. ಸುಳ್ಳು, ಮೋಸ ವಂಚನೆಯಿಂದ ಎಷ್ಟು ದಿನ ಇರುತ್ತೀರಾ. ವೋಟ್ ಬ್ಯಾಂಕ್‌ಗಾಗಿ ಏಸು ಪ್ರತಿಮೆ ನಿರ್ಮಾಣಕ್ಕೆ ಹೊರಟಿದ್ದೀರಾ. ಅಮೆರಿಕ, ಇಂಗ್ಲೆಂಡ್‌ನಲ್ಲಿ ಬೇಕಾದರೆ ಪ್ರತಿಮೆ ನಿರ್ಮಾಣ ಮಾಡಿ. ಆದರೆ ಇಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾವು ಅವಕಾಶ ಕೊಡುವುದಿಲ್ಲ” ಎಂದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago