ಬೆಂಗಳೂರು : ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ನೂರಾರು ಕಾರ್ಯಕರ್ತರು ಕನಕಪುರ ಅಯ್ಯಪ್ಪಸ್ವಾಮಿ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ಪ್ರತಿಭಟನೆ ನಡೆಸಿದರು.
ರಾಮನಗರದ ಜಿಲ್ಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಅತೀ ಎತ್ತರದ ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಸೋಮವಾರ ಹಿಂದೂ ಜಾಗರಣ ವೇದಿಕೆ ಕನಕಪುರ ಚಲೋ ಮೂಲಕ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದ ಪ್ರಭಾಕರ್ ಭಟ್, “ನಾವು ಶಾಂತಿ ಕದಡಲು ಬಂದಿಲ್ಲ. ನಾವು ಬಲಿದಾನಕ್ಕೂ ಸಿದ್ದರಿದ್ದೇವೆ. ಸಂಸ್ಕೃತಿಗೆ ಕಲ್ಲು ಹಾಕಲು ಹೊರಟವರಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಹೊರಟಿದ್ದೀರಿ. ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡುವ ಬದಲು ಪೇಜಾವರಶ್ರೀಗಳ ಪ್ರತಿಮೆ ನಿರ್ಮಾಣ ಮಾಡಿ. ದೇಶದಲ್ಲಿರುವ ಹಿಂದೂಗಳ ಜಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೇವೆ” ಎಂದು ಹೇಳಿದರು.
“ಡಿ.ಕೆ ಶಿವಕುಮಾರ್ ಅವರೇ ನಾನು ಯಾರೆಂದು ನಿಮಗೆ ಗೊತ್ತಿಲ್ಲವೇ. ನಾನು ಶ್ರೀರಾಮುಲು ಮಗಳ ಮದುವೆಯಲ್ಲಿ ನಿಮ್ಮನ್ನು ಭೇಟಿಯಾಗಿದ್ದೆ. ಸುಳ್ಳು, ಮೋಸ ವಂಚನೆಯಿಂದ ಎಷ್ಟು ದಿನ ಇರುತ್ತೀರಾ. ವೋಟ್ ಬ್ಯಾಂಕ್ಗಾಗಿ ಏಸು ಪ್ರತಿಮೆ ನಿರ್ಮಾಣಕ್ಕೆ ಹೊರಟಿದ್ದೀರಾ. ಅಮೆರಿಕ, ಇಂಗ್ಲೆಂಡ್ನಲ್ಲಿ ಬೇಕಾದರೆ ಪ್ರತಿಮೆ ನಿರ್ಮಾಣ ಮಾಡಿ. ಆದರೆ ಇಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾವು ಅವಕಾಶ ಕೊಡುವುದಿಲ್ಲ” ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…