ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22 ರಿಂದ ಮೇ 18ರ ತನಕ ವಿವಿಧ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್, ಮೇ ತಿಂಗಳಲ್ಲಿ ನಡೆಸಲು ತಯಾರಿ ನಡೆದಿತ್ತು. ಈ ಹಿಂದೆಯೂ ಪಿಯು ಬೋರ್ಡ್ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದರೆ, ಜೆಇಇ (JEE) ಪರೀಕ್ಷೆಯ ಮೊದಲನೆಯ ಸೆಷನ್ ಏಪ್ರಿಲ್ 16ರಿಂದ 21ರವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಆಗಿತ್ತು. ಇದೇ ವೇಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್ 16ರಿಂದ ಮೇ 06ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು.
ಜೆಇಇ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ದಿನಾಂಕಗಳು ಒಟ್ಟಿಗೆ ಬರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕರಿಸಿ, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿತ್ತು. ವಿದ್ಯಾರ್ಥಿಗಳು/ಪೋಷಕರುಗಳಿಂದ ಆಕ್ಷೇಪಣೆ ಗಳನ್ನು ಸಲ್ಲಿಸಲು ಮಾರ್ಚ್ 5ರ ಸಂಜೆ 5:00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ವೇಳಾಪಟ್ಟಿಯ ದಿನ ದಂದು ಸಿಎಲ್ಎಟಿ ಪರೀಕ್ಷೆ, ಎಐಎಂಎ ಯುಜಿಎಟಿ ಪರೀಕ್ಷೆ ಹಾಗೂ ನವೋದಯ ವಿದ್ಯಾಲಯ ಪರೀಕ್ಷೆ ಇರುವುದಾಗಿ ಆಕ್ಷೇಪಣೆಗಳು ಸಲ್ಲಿಕೆಯಾ ಗಿವೆ. ಹೀಗಾಗಿ ಇದನ್ನ ಪರಿಗಣಿಸಿ ಅಂತಿಮ ವೇಳಾಪಟ್ಟಿಯನ್ನು ಪರಿಷ್ಕರಿಸಿ ಬಿಡುಗಡೆ ಮಾಡಲಾಗಿದೆ. ಅದರಂತೆ ಏಪ್ರಿಲ್ 22ರಿಂದ ಮೇ 18ರವರೆಗೆ ಪರೀಕ್ಷೆ ನಡೆಯಲಿದೆ.
22-4-2022 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
23-4-2022 – ಗಣಿತ, ಶಿಕ್ಷಣ ಶಾಸ್ತ್ರ
25-4-2022 – ಅರ್ಥಶಾಸ್ತ್ರ
26-4-2022 – ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
27-4-2022 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
28-4-2022 – ಅರೇಬಿಕ್, ಕನ್ನಡ
2-5-2022 – ಭೂಗೋಳ ಶಾಸ್ತ್ರ, ಜೀವಶಾಸ್ತ್ರ
4-5-2022 – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್
5-5-2022 – ಇಂಗ್ಲಿಷ್
10- 5-2022 – ಇತಿಹಾಸ, ಭೌತಶಾಸ್ತ್ರ
12-5-2022 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
14-5-2022 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
17 -5-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ
18-5-2022 – ಹಿಂದಿ
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…