ಏ. 27ರಂದು ರಾಹುಲ್ ಗಾಂಧಿ ಉಡುಪಿಗೆ : ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ – Vishwanews24
ಏ. 27ರಂದು ರಾಹುಲ್ ಗಾಂಧಿ ಉಡುಪಿಗೆ : ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ
ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಭರಾಟೆ ಮುಗಿದಿದೆ. ಇಂದಿನಿಂದ ಅಭ್ಯರ್ಥಿಗಳ ಚುನಾವಣೆ ಪ್ರಚಾರ ವೇಗ ಪಡೆದುಕೊಳ್ಳಲಿದೆ. ಮತದಾನಕ್ಕೆ ದಿನಗಣನೆ ಸಮೀಪಿಸುತ್ತಿರುವಂತೆಯೇ, ವಿವಿಧ ಪಕ್ಷಗಳಿಗೆ ಸೇರಿದ ಹಿರಿಯ ರಾಜಕಾರಣಿಗಳು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ರಾಹುಲ್ ಗಾಂಧಿ ಎಪ್ರಿಲ್ 27 ರಂದು ಉಡುಪಿಗೆ ಆಗಮಿಸಲಿದ್ದು, ಅಂದು ಅವರು ಕಾಪು ತಾಲ್ಲೂಕಿನ ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಮೀನುಗಾರರ ಸಮಸ್ಯೆ, ಮೀನುಗಾರಿಕಾ ಕ್ಷೇತ್ರದ ಸವಾಲುಗಳು ಸೇರಿದಂತೆ ಹಲವು ವಿಚಾರಗಳ ಕುರಿತು ರಾಹುಲ್ ಸಂವಾದದಲ್ಲಿ ಮಾತನಾಡಲಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭೇಟಿ ಪಕ್ಷಕ್ಕೆ ಶಕ್ತಿ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
