ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 4 ರಿಂದ 14ರವರೆಗೆ ದ್ರೌಪತಮ್ಮ ಶಕ್ತ್ಯೋತ್ಸವ ಹನ್ನೊಂದು ದಿನಗಳ ಕಾಲ ನಡೆಯಲಿದೆ.
ಇನ್ನು ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರಕರಗವನ್ನು ಹೊರಲಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ಸತತವಾಗಿ ಬೆಂಗಳೂರು ಕರಗವನ್ನು ಪೂಜಾರಿ ಎ.ಜ್ಞಾನೇಂದ್ರ ಹೊರುತ್ತಿದ್ದಾರೆ. ಈ ಬಾರಿ ಕರಗ ಹೊತ್ತರೇ 15ನೇ ಬಾರಿ ಕರಗ ಹೊತ್ತಂತೆ ಆಗುತ್ತದೆ. ಜ.27ರಂದು ರಾತ್ರಿ ನಡೆದ ಸಭೆಯಲ್ಲಿ ಜ್ಞಾನೇಂದ್ರ ಸ್ವಾಮಿಯನ್ನು ಮತ್ತೆ ಕರಗ ಹೊರಲು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಣಾಧಿಕಾರಿ ನವೀನ್, ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್, ಖಜಾಂಚಿ ಜಿ.ಬಾಲಕೃಷ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯ ಅಮರನಾರಾಯಣ್ ಸಭೆ ನಡೆಸಿ ದಿನಾಂಕ ಹಾಗೂ ಕರಗ ಹೊರುವವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಸತತ 15ನೇ ಬಾರಿ ಕರಗ ಹೊರುತ್ತಿರುವ ಕರಗದ ಪೂಜಾರಿ ಎ. ಜ್ಞಾನೇಂದ್ರರಿಗೆ ಇದು ಕೊನೆಯ ಕರಗ ಶಕ್ತ್ಯೋತ್ಸವ ಆಗಿದೆ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…