ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 4 ರಿಂದ 14ರವರೆಗೆ ದ್ರೌಪತಮ್ಮ ಶಕ್ತ್ಯೋತ್ಸವ ಹನ್ನೊಂದು ದಿನಗಳ ಕಾಲ ನಡೆಯಲಿದೆ.
ಇನ್ನು ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರಕರಗವನ್ನು ಹೊರಲಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ಸತತವಾಗಿ ಬೆಂಗಳೂರು ಕರಗವನ್ನು ಪೂಜಾರಿ ಎ.ಜ್ಞಾನೇಂದ್ರ ಹೊರುತ್ತಿದ್ದಾರೆ. ಈ ಬಾರಿ ಕರಗ ಹೊತ್ತರೇ 15ನೇ ಬಾರಿ ಕರಗ ಹೊತ್ತಂತೆ ಆಗುತ್ತದೆ. ಜ.27ರಂದು ರಾತ್ರಿ ನಡೆದ ಸಭೆಯಲ್ಲಿ ಜ್ಞಾನೇಂದ್ರ ಸ್ವಾಮಿಯನ್ನು ಮತ್ತೆ ಕರಗ ಹೊರಲು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಣಾಧಿಕಾರಿ ನವೀನ್, ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್, ಖಜಾಂಚಿ ಜಿ.ಬಾಲಕೃಷ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯ ಅಮರನಾರಾಯಣ್ ಸಭೆ ನಡೆಸಿ ದಿನಾಂಕ ಹಾಗೂ ಕರಗ ಹೊರುವವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಸತತ 15ನೇ ಬಾರಿ ಕರಗ ಹೊರುತ್ತಿರುವ ಕರಗದ ಪೂಜಾರಿ ಎ. ಜ್ಞಾನೇಂದ್ರರಿಗೆ ಇದು ಕೊನೆಯ ಕರಗ ಶಕ್ತ್ಯೋತ್ಸವ ಆಗಿದೆ
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…