ಬೆಂಗಳೂರು(Vishwanews24) : 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸಾರಿಗೆ ಇಲಾಖಾಧಿಕಾರಿಗಳು ಹಾಗೂ ನಾಲ್ಕು ಸಾರಿಗೆ ನಿಗಮದ ವ್ಯವಸ್ಥಾಪಕರ ಜೊತೆ ಸಭೆ ನಡೆಸಿದರು. ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ”ಸಾರಿಗೆ ನೌಕರರು ಮುಷ್ಕರ ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ,ಎಸ್ಮಾ ಸೇರಿದಂತೆ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು.
”ಹಾಗೆಯೇ ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ. ಆರನೇ ವೇತನ ಆಯೋಗ ಜಾರಿಗೊಳಿಸಲು ಸಾಧ್ಯವೂ ಇಲ್ಲ. ಈಗಾಗಲೇ ಕೊರೊನಾ ಕಾರಣದಿಂದಾಗಿ ಮುಷ್ಕರ ಮಾಡಬೇಡಿ ಎಂದು ಮನವಿ ಮಾಡಿದ್ದೇವೆ. ಅಷ್ಟಕ್ಕೂ ಮುಷ್ಕರ ನಡೆಸಿದರೆ ಎಸ್ಮಾ ಜಾರಿ ಮಾಡಲಾಗುವುದು. ಹಾಗೆಯೇ ಸರ್ಕಾರ ಸಾರಿಗೆ ವ್ಯವಸ್ಥೆ ನಿರ್ವಹಿಸಲು ಪರ್ಯಾಯ ವ್ಯವಸ್ಥೆ ಮಾಡಲು ಸಿದ್ದವಿದೆ” ಎಂದರು.
ರಾಜ್ಯದಲ್ಲಿ ಮತ್ತೆ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ! Vishwanews24
”ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಸೇರಿದಂತೆ ಎಲ್ಲಾವನ್ನೂ ಪರವಾನಗಿ ಕೇಳದೆ ಸಂಚಾರಕ್ಕೆ ಅವಕಾಶ ಕಲ್ಪಿಸುತ್ತೇವೆ. ರೂಟ್, ಪರ್ಮಿಟ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡುತ್ತೇವೆ. ಆದರೆ ಯಾವುದೇ ಕಾರಣಕ್ಕೂ ಮತ್ತೆ ಸಂಧಾನ ಇಲ್ಲ” ಎಂದು ಸ್ಪಷ್ಟಪಡಿಸಿದರು.
”6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಸಾಧ್ಯವಿಲ್ಲವಾದರೂ ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಈಗ ಉಪಚುನಾವಣೆ ನಡೆಯುವ ಕಾರಣ ನೀತಿ ಸಂಹಿತೆ ಜಾರಿಯಲ್ಲಿದೆ. ನೌಕಕರ ಸಂಬಳ ಹೆಚ್ಚಳ ಘೋಷಣೆ ಮಾಡಲು ಈಗಾಗಲೇ ಚುನಾವಣಾ ಆಯೋಗದ ಅನುಮತಿಯೂ ಕೋರಲಾಗಿದೆ” ಎಂದು ತಿಳಿಸಿದರು.
ಯಾವ ಪ್ರತಿಭಟನೆ ಮಾಡುವಂತಿಲ್ಲ, ಪ್ರತಿಭಟನೆ ನಡೆಸಿದ್ರೆ ಬಂಧಿಸುತ್ತೇವೆ : ಕಮಲ್ ಪಂಥ್ ಎಚ್ಚರಿಕೆ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…