ವಾಷಿಂಗ್ಟನ್ : ಅಂತರಾಷ್ಟ್ರೀಯ ಹಣಕಾಸು ನಿಧಿಯ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥನ್ ಅವರು ಬಡ್ತಿ ಪಡೆದಿದ್ದಾರೆ.
“ಮುಂದಿನ ವರ್ಷದ ಮೊದಲ ತಿಂಗಳಿನಲ್ಲಿ ಐಎಂಎಫ್ನ ಉಪ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜೆಫ್ರಿ ಒಕಾಮೊಟೊ ಅವರು ನಿವೃತ್ತರಾಗಲಿದ್ದು, ಈ ಹಿನ್ನೆಲೆ ಗೀತಾ ಗೋಪಿನಾಥನ್ ಅವರಿಗೆ ಉನ್ನತ ಹುದ್ದೆ ನೀಡಲಾಗಿದೆ” ಎಂದು ಐಎಂಎಫ್ ಹೇಳಿದೆ.
“ಗೀತಾ ಹಾಗೂ ಜೆಫ್ರಿ ಅವರು ಉತ್ತಮ ಸಹೋದ್ಯೋಗಿಗಳು. ನನಗೆ ಜೆಫ್ರಿ ಅವರು ತೊರೆಯುತ್ತಿರುವ ವಿಚಾರ ಬೇಸರ ತಂದಿದೆ. ಆದರೆ, ಗೀತಾ ಅವರು ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ಸಂತಸದ ವಿಚಾರ” ಎಂದು ಐಎಂಎಫ್ನ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಗೀತಾ ಅವರು ಮೈಸೂರಿನಲ್ಲಿ ಜನಿಸಿದ್ದು, ಐಎಂಎಫ್ನಲ್ಲಿ 2019ರ ಜನವರಿಯಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕೆಲಸ ಪ್ರಾರಂಭಿಸಿದ್ದರು. ಇದಕ್ಕೂ ಮುನ್ನ ಗೀತಾ ಅವರು ಹಾವರ್ಡ್ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…