ಬೆಂಗಳೂರು : ಐಎಂಎ ವಂಚನೆ ಪ್ರಕರಣ ಸಂಬಂಧ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗ್ಗೆ ಮೂರ್ನಾಲ್ಕು ಜೀಪ್ ಗಳಲ್ಲಿ ಬಂದಿರೋ ಎಸಿಬಿ ತಂಡದಿಂದ ದಾಳಿ ನಡೆದ್ದು, ಬೆಂಗಳೂರಿನ ಬಂಬೂ ಬಜಾರ್ ನಲ್ಲಿರೋ ಅಹಮದ್ ಖಾನ್ ರವರ ಮನೆ ಸೇರಿ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಆಫೀಸ್ , ಸಿಲ್ವರ್ ಓಕ್ ವಸತಿ ಸಮುಚ್ಚಯದಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ 40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆಯನ್ನು ಆರಂಭಿಸಿದ್ದಾರೆ.
ಎಸ್ ಪಿ ಯತೀಶ್ ಚಂದ್ರ ಅವರ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿಯೇ ಇದ್ದರು ಎಂಬ ಮಾಹಿತಿಲಭ್ಯವಾಗಿದ್ದು, ಶಾಸಕ ಜಮೀರ್ ಅಹ್ಮದ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಹಾಗೂ ಅವರ ನಿವಾಸದ ಮುಂದೆ ಸ್ಥಳೀಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…