Featured

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಜಾಲತಾಣ ಪೋಸ್ಟ್‌ ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ರೂಪಾಗೆ ಸುಪ್ರೀಂ ಸೂಚನೆ – vishwanews24

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಜಾಲತಾಣ ಪೋಸ್ಟ್‌ ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ರೂಪಾಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾಡಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ಡಿ. ರೂಪಾ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಆದೇಶ ನೀಡಿದೆ.

ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಮೇಲಿನ ಆದೇಶ ನೀಡಿದೆ.

ಕರ್ನಾಟಕದ ಇಬ್ಬರು ಮಹಿಳಾ ಅಧಿಕಾರಿಗಳಿಗೂ ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸುವಂತೆ ಡಿಸೆಂಬರ್‌ 13ರಂದು ನ್ಯಾಯಾಲಯ ಸಲಹೆ ನೀಡಿತ್ತು. ಆದರೆ ಮಾತುಕತೆ ಮತ್ತು ಸಂಧಾನ ಸಾಧ್ಯವಿಲ್ಲ ಎಂದು ಇಬ್ಬರೂ ಅಧಿಕಾರಿಗಳು ವಿಚಾರಣೆ ವೇಳೆ ಹೇಳಿದ್ದರು.

ಗುರುವಾರ ಈ ವಿಚಾರ ಪ್ರಸ್ತಾಪಿಸಿದ ನ್ಯಾಯಪೀಠ ಇಬ್ಬರು ಅಧಿಕಾರಿಗಳೂ ಸೌಹಾರ್ದಯುತವಾಗಿ ಪರಿಹರಿಸಲು ಮುಂದಾಗದೇ ಇರುವುದಕ್ಕೆ ತನ್ನ ನಿರಾಸೆ ವ್ಯಕ್ತಪಡಿಸಿದೆ.

“ಐಎಎಸ್‌, ಐಪಿಎಸ್‌ ಅಧಿಕಾರಿಗಳು ಈ ರೀತಿ ಕಚ್ಚಾಡಿಕೊಂಡರೆ ಆಡಳಿತ ಹೇಗೆ ಸಾಧ್ಯ,” ಎಂದು ನ್ಯಾಯಮೂರ್ತಿಗಳಾದ ಎಸ್‌ ಓಕಾ ಮತ್ತು ಪಂಕಜ್‌ ಮಿತ್ತಲ್‌ ಅವರ ಪೀಠ ಪ್ರಶ್ನಿಸಿದೆ.

ಐಪಿಎಸ್‌ ಅಧಿಕಾರಿ ರೂಪಾ ಅವರು ರೋಹಿಣಿ ಅವರ ಖಾಸಗಿ ಚಿತ್ರಗಳನ್ನು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರ ಇಬ್ಬರು ಮಹಿಳಾ ಅಧಿಕಾರಿಗಳ ನಡುವೆ ವಿವಾದ ಇನ್ನಷ್ಟು ತೀವ್ರಗೊಂಡಿತ್ತು. ರೂಪಾ ಅವರು ರೋಹಿಣಿ ವಿರುದ್ಧ ಭ್ರಷ್ಟಾಚಾರ ಸೇರಿದಂತೆ 19 ಆರೋಪ ಹೊರಿಸಿದ್ದಾರೆ ಹಾಗೂ ತನಿಖೆ ನಡೆಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೂ ಪತ್ರ ಬರೆದಿದ್ದರು.

ಇದರ ಬೆನ್ನಲ್ಲೇ ಸಿಂಧೂರಿ ಅವರು ರೂಪಾ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ರೂಪಾ ತಾವು ತೆಗೆದುಹಾಕಿದ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಕುರಿತು ವಿವರ ನೀಡುವಂತೆ ನ್ಯಾಯಾಲಯ ಹೇಳಿದೆ. ಒಂದು ವೇಳೆ ಯಾವುದೇ ಕಾರಣಕ್ಕೂ ಪೋಸ್ಟ್‌ಗಳನ್ನು ಅಳಿಸಲು ಸಾಧ್ಯವಾಗದೇ ಇದ್ದರೆ ರೋಹಿಣಿ ವಿರುದ್ಧದ ಹೇಳಿಕೆಗಳನ್ನು ವಾಪಸ್‌ ಪಡೆದ ಕುರಿತು ಸ್ಪಷ್ಟೀಕರಣ ನೀಡಿ ಒಂದು ಪೋಸ್ಟ್‌ ಹಾಕಬೇಕು, ಇಡೀ ವಿವಾದ ಅಂತ್ಯಗೊಳಿಸುವುದು ನ್ಯಾಯಾಲಯದ ಉದ್ದೇಶ ಎಂದು ನ್ಯಾಯಪೀಠ ಹೇಳಿದೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

19 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

19 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

21 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

22 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

23 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

23 hours ago