Featured

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಜಾಲತಾಣ ಪೋಸ್ಟ್‌ ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ರೂಪಾಗೆ ಸುಪ್ರೀಂ ಸೂಚನೆ – vishwanews24

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಜಾಲತಾಣ ಪೋಸ್ಟ್‌ ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ರೂಪಾಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾಡಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ಡಿ. ರೂಪಾ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಆದೇಶ ನೀಡಿದೆ.

ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಮೇಲಿನ ಆದೇಶ ನೀಡಿದೆ.

ಕರ್ನಾಟಕದ ಇಬ್ಬರು ಮಹಿಳಾ ಅಧಿಕಾರಿಗಳಿಗೂ ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸುವಂತೆ ಡಿಸೆಂಬರ್‌ 13ರಂದು ನ್ಯಾಯಾಲಯ ಸಲಹೆ ನೀಡಿತ್ತು. ಆದರೆ ಮಾತುಕತೆ ಮತ್ತು ಸಂಧಾನ ಸಾಧ್ಯವಿಲ್ಲ ಎಂದು ಇಬ್ಬರೂ ಅಧಿಕಾರಿಗಳು ವಿಚಾರಣೆ ವೇಳೆ ಹೇಳಿದ್ದರು.

ಗುರುವಾರ ಈ ವಿಚಾರ ಪ್ರಸ್ತಾಪಿಸಿದ ನ್ಯಾಯಪೀಠ ಇಬ್ಬರು ಅಧಿಕಾರಿಗಳೂ ಸೌಹಾರ್ದಯುತವಾಗಿ ಪರಿಹರಿಸಲು ಮುಂದಾಗದೇ ಇರುವುದಕ್ಕೆ ತನ್ನ ನಿರಾಸೆ ವ್ಯಕ್ತಪಡಿಸಿದೆ.

“ಐಎಎಸ್‌, ಐಪಿಎಸ್‌ ಅಧಿಕಾರಿಗಳು ಈ ರೀತಿ ಕಚ್ಚಾಡಿಕೊಂಡರೆ ಆಡಳಿತ ಹೇಗೆ ಸಾಧ್ಯ,” ಎಂದು ನ್ಯಾಯಮೂರ್ತಿಗಳಾದ ಎಸ್‌ ಓಕಾ ಮತ್ತು ಪಂಕಜ್‌ ಮಿತ್ತಲ್‌ ಅವರ ಪೀಠ ಪ್ರಶ್ನಿಸಿದೆ.

ಐಪಿಎಸ್‌ ಅಧಿಕಾರಿ ರೂಪಾ ಅವರು ರೋಹಿಣಿ ಅವರ ಖಾಸಗಿ ಚಿತ್ರಗಳನ್ನು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರ ಇಬ್ಬರು ಮಹಿಳಾ ಅಧಿಕಾರಿಗಳ ನಡುವೆ ವಿವಾದ ಇನ್ನಷ್ಟು ತೀವ್ರಗೊಂಡಿತ್ತು. ರೂಪಾ ಅವರು ರೋಹಿಣಿ ವಿರುದ್ಧ ಭ್ರಷ್ಟಾಚಾರ ಸೇರಿದಂತೆ 19 ಆರೋಪ ಹೊರಿಸಿದ್ದಾರೆ ಹಾಗೂ ತನಿಖೆ ನಡೆಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೂ ಪತ್ರ ಬರೆದಿದ್ದರು.

ಇದರ ಬೆನ್ನಲ್ಲೇ ಸಿಂಧೂರಿ ಅವರು ರೂಪಾ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ರೂಪಾ ತಾವು ತೆಗೆದುಹಾಕಿದ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಕುರಿತು ವಿವರ ನೀಡುವಂತೆ ನ್ಯಾಯಾಲಯ ಹೇಳಿದೆ. ಒಂದು ವೇಳೆ ಯಾವುದೇ ಕಾರಣಕ್ಕೂ ಪೋಸ್ಟ್‌ಗಳನ್ನು ಅಳಿಸಲು ಸಾಧ್ಯವಾಗದೇ ಇದ್ದರೆ ರೋಹಿಣಿ ವಿರುದ್ಧದ ಹೇಳಿಕೆಗಳನ್ನು ವಾಪಸ್‌ ಪಡೆದ ಕುರಿತು ಸ್ಪಷ್ಟೀಕರಣ ನೀಡಿ ಒಂದು ಪೋಸ್ಟ್‌ ಹಾಕಬೇಕು, ಇಡೀ ವಿವಾದ ಅಂತ್ಯಗೊಳಿಸುವುದು ನ್ಯಾಯಾಲಯದ ಉದ್ದೇಶ ಎಂದು ನ್ಯಾಯಪೀಠ ಹೇಳಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago