ಕುಂದಾಪುರ: ಐತಿಹಾಸಿಕ ಬಸ್ರೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ತೋರಿ 2 ಲಕ್ಷ ಮೌಲ್ಯದ ಮುಖವಾಡ ಕಳವುಗೈದಿದ್ದಾರೆ. ದೇವಸ್ಥಾನದ ಹಿಂಭಾಗದ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ದೇವಿಗೆ ಹಾಕಲಾಗಿದ್ದ ಸುಮಾರು ಎರಡು ಕೆಜಿ ಬೆಳ್ಳಿಯ ಮುಖವಾಡ ಮತ್ತು ಗಣಪತಿಗೆ ಹಾಕಲಾಗಿದ್ದ ಎರಡು ಕೆಜಿ ಬೆಳ್ಳಿ ಮುಖವಾಡ ಕಳವುಗೈದಿದ್ದಾರೆ.
ಜು .29 ರ ಭಾನುವಾರ ರಾತ್ರಿ ಸುಮಾರು 1 ಗಂಟೆಗೆ ಒಳ ನುಗ್ಗಿದ್ದ ಕಳ್ಳರು ದೇವಸ್ಥಾನದ ಪಕ್ಕದಲ್ಲಿ ಅರ್ಚಕರು ಮಲಗಿದ್ದ ಕೋಣೆಗೆ ಹೊರಗಿನಿಂದ ಚಿಲಕ ಹಾಕಿ ಬಂಧಿಸಿ ಕಳ್ಳತನವೆಸಗಿದ್ದಾರೆ. ದೇವಸ್ಥಾನದ ಪ್ರಧಾನ ಗರ್ಭಗುಡಿಕ್ಕೂ ಪ್ರವೇಶಿಸಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದಾಗ ಸೈರನ್ ಮೊಳಗಿ ಕಳ್ಳರು ಪರಾರಿಯಾಗಿದ್ದಾರೆ. ಸೈರನ್ ಶಬ್ದಕ್ಕೆ ಎಚ್ಚೆತ್ತ ಅರ್ಚಕರು ಮತ್ತು ಸಿಬ್ಬಂದಿಗಳು ಹೊರಗಿನಿಂದ ಚಿಲಕ ಹಾಕಿದ್ದ ಹಿನ್ನಲೆಯಲ್ಲಿ ಹೊರಕ್ಕೆ ಬರಲಾಗದೆ ಅಸಹಾಯಕರಾಗಿದ್ದಾರೆ.
ಸೈರನ್ ಸದ್ದಿಗೆ ಎಚ್ಚೆತ್ತ ಗ್ರಾಮಸ್ಥರು ಕಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ, ಆದರೆ ಚಲಾಕಿ ಚೋರರು ದೇವಸ್ಥಾನದ ಹಿಂಭಾಗದ ಅನ್ಗಳ್ಳಿ ಸಂಪರ್ಕ ರಸ್ತೆಯಿಂದ ಪರಾರಿಯಾಗಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳಕ್ಕೆ ಧಾವಿಸಿ ಬಂದ ಕಂಡ್ಲೂರು ಪೊಲೀಸರು ಪರಿಶೀಲನೆ ನಡೆಸಿ ಸಿಸಿ ಟಿವಿ ಪರಿಶೀಲಶಿದ್ದಾರೆ. , ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…