Featured

ಐತಿಹಾಸಿಕ‌ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ – ಸೈರನ್ ಮೊಳಗಿ ಪರಾರಿಯಾದ ಚಲಾಕಿ ಚೋರರು

ಕುಂದಾಪುರ: ಐತಿಹಾಸಿಕ‌ ಬಸ್ರೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ತೋರಿ 2 ಲಕ್ಷ ಮೌಲ್ಯದ ಮುಖವಾಡ ಕಳವುಗೈದಿದ್ದಾರೆ. ದೇವಸ್ಥಾನದ ಹಿಂಭಾಗದ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ದೇವಿಗೆ ಹಾಕಲಾಗಿದ್ದ ಸುಮಾರು ಎರಡು ಕೆಜಿ ಬೆಳ್ಳಿಯ ಮುಖವಾಡ ಮತ್ತು ಗಣಪತಿಗೆ ಹಾಕಲಾಗಿದ್ದ ಎರಡು ಕೆಜಿ ಬೆಳ್ಳಿ‌ ಮುಖವಾಡ ಕಳವುಗೈದಿದ್ದಾರೆ.

ಜು .29 ರ ಭಾನುವಾರ ರಾತ್ರಿ ಸುಮಾರು 1 ಗಂಟೆಗೆ ಒಳ ನುಗ್ಗಿದ್ದ ಕಳ್ಳರು ದೇವಸ್ಥಾನದ ಪಕ್ಕದಲ್ಲಿ ಅರ್ಚಕರು ಮಲಗಿದ್ದ ಕೋಣೆಗೆ ಹೊರಗಿನಿಂದ ಚಿಲಕ ಹಾಕಿ ಬಂಧಿಸಿ ಕಳ್ಳತನವೆಸಗಿದ್ದಾರೆ. ದೇವಸ್ಥಾನದ ಪ್ರಧಾನ‌‌‌ ಗರ್ಭಗುಡಿಕ್ಕೂ ಪ್ರವೇಶಿಸಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದಾಗ ಸೈರನ್ ಮೊಳಗಿ ಕಳ್ಳರು ಪರಾರಿಯಾಗಿದ್ದಾರೆ. ಸೈರನ್ ಶಬ್ದಕ್ಕೆ ಎಚ್ಚೆತ್ತ ಅರ್ಚಕರು ಮತ್ತು ಸಿಬ್ಬಂದಿಗಳು ಹೊರಗಿನಿಂದ ಚಿಲಕ ಹಾಕಿದ್ದ ಹಿನ್ನಲೆಯಲ್ಲಿ ಹೊರಕ್ಕೆ ಬರಲಾಗದೆ ಅಸಹಾಯಕರಾಗಿದ್ದಾರೆ.

ಸೈರನ್ ಸದ್ದಿಗೆ ಎಚ್ಚೆತ್ತ ಗ್ರಾಮಸ್ಥರು ಕಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ, ಆದರೆ ಚಲಾಕಿ ಚೋರರು ದೇವಸ್ಥಾನದ ಹಿಂಭಾಗದ ಅನ್ಗಳ್ಳಿ ಸಂಪರ್ಕ ರಸ್ತೆಯಿಂದ ಪರಾರಿಯಾಗಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳಕ್ಕೆ ಧಾವಿಸಿ ಬಂದ ಕಂಡ್ಲೂರು ಪೊಲೀಸರು ಪರಿಶೀಲನೆ ನಡೆಸಿ ಸಿಸಿ ಟಿವಿ ಪರಿಶೀಲಶಿದ್ದಾರೆ. , ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

4 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

5 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago