Featured

ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು : ವಿ. ಸೋಮಣ್ಣ -Vishwanews24

ಮೈಸೂರು: ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಹೇಳಿದ್ದಾರೆ.

ದಸರಾ ಮಹೋತ್ಸವ ಸಿದ್ದತೆ ಕುರಿತು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶೀಲನ ಸಭೆ ನಡೆಸಿದ ಅವರು ಈ ವರ್ಷ ದಸರಾ ಮಹೋತ್ಸವ ಇನ್ನೂ ಭಕ್ತಿಯಿಂದ ಹೊಸ ನಾವಿನ್ಯತೆ ಜೊತೆಗೆ ಆಚರಿಸಬೇಕಿದೆ. ಇದಕ್ಕೆ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ದಸರಾ ಸಂಘಟನೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಅಗತ್ಯ ಪ್ರಮಾಣದ ಹಣ ಸರ್ಕಾರದಿಂದ ದೊರೆಯಲಿದೆ. ಆದರೆ ಅನುದಾನದಲ್ಲಿ ಒಂದು ರೂಪಾಯಿ ಕೂಡ ದುರ್ಬಳಕೆಯಾಗದಂತೆ ವ್ಯವಸ್ಥಿತವಾಗಿ ಹೆಚ್ಚು ಮೆರುಗಿನಿಂದ ಸಾಂಸ್ಕೃತಿಕ ನೆಲಗಟ್ಟಿನಲ್ಲಿ ನಾಡಹಬ್ಬ ಸಂಘಟನೆಯಾಗಬೇಕು ಎಂದು ಸಚಿವರು ಹೇಳಿದರು.

ಇದು ಜನರ ಉತ್ಸವವಾಗಬೇಕು, ಎಲ್ಲ ಜನಪ್ರತಿನಿಧಿಗಳು ಸಂಘಸಂಸ್ಥೆಗಳನ್ನು ಒಳಗೊಂಡಂತೆ ಗ್ರಾಮಮಟ್ಟದಲ್ಲಿ ಮನೆ ಮನೆಗಳಲ್ಲಿ ದಸರಾ ನಡೆಯುವಂತಾಗಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆ, ಫಲಪುಷ್ಪ ಪ್ರದರ್ಶನ, ಲಲಿತಕಲೆ, ಸೇರಿದಂತೆ ಎಲ್ಲಾ ಚಟುವಟಿಕೆಗಳಲ್ಲಿ ವೈವಿಧ್ಯತೆ ಗುಣಮಟ್ಟ ಕೂಡಿರಬೇಕು. ಇದಕ್ಕೆ ಉಪಸಮಿತಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ವಿದ್ಯುತ್ ದೀಪಾಲಂಕಾರ ಹಿಂದೆಂದಿಗಿಂತಲೂ ಉತ್ತಮವಾಗಬೇಕು. ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು, ಜನಪ್ರತಿನಿಧಿಗಳ ಸಲಹೆ, ಸಹಕಾರ ಪಡೆದು ವೈಶಿಷ್ಟಪೂರ್ಣವಾಗಿ ದಸರಾ ಆಚರಣೆ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ.ಜಿ. ಶಂಕರ್, ಅವರು ಎಸ್ಪಿ ರಿಷ್ಯಾಂತ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಜಿಪಂ ಸಿಇಓ ಕೆ.ಜ್ಯೋತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಪಿ.ಎಸ್. ಕಾಂತರಾಜು, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

12 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

13 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

14 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

14 hours ago