Featured

ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು : ವಿ. ಸೋಮಣ್ಣ -Vishwanews24

ಮೈಸೂರು: ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಹೇಳಿದ್ದಾರೆ.

ದಸರಾ ಮಹೋತ್ಸವ ಸಿದ್ದತೆ ಕುರಿತು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶೀಲನ ಸಭೆ ನಡೆಸಿದ ಅವರು ಈ ವರ್ಷ ದಸರಾ ಮಹೋತ್ಸವ ಇನ್ನೂ ಭಕ್ತಿಯಿಂದ ಹೊಸ ನಾವಿನ್ಯತೆ ಜೊತೆಗೆ ಆಚರಿಸಬೇಕಿದೆ. ಇದಕ್ಕೆ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ದಸರಾ ಸಂಘಟನೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಅಗತ್ಯ ಪ್ರಮಾಣದ ಹಣ ಸರ್ಕಾರದಿಂದ ದೊರೆಯಲಿದೆ. ಆದರೆ ಅನುದಾನದಲ್ಲಿ ಒಂದು ರೂಪಾಯಿ ಕೂಡ ದುರ್ಬಳಕೆಯಾಗದಂತೆ ವ್ಯವಸ್ಥಿತವಾಗಿ ಹೆಚ್ಚು ಮೆರುಗಿನಿಂದ ಸಾಂಸ್ಕೃತಿಕ ನೆಲಗಟ್ಟಿನಲ್ಲಿ ನಾಡಹಬ್ಬ ಸಂಘಟನೆಯಾಗಬೇಕು ಎಂದು ಸಚಿವರು ಹೇಳಿದರು.

ಇದು ಜನರ ಉತ್ಸವವಾಗಬೇಕು, ಎಲ್ಲ ಜನಪ್ರತಿನಿಧಿಗಳು ಸಂಘಸಂಸ್ಥೆಗಳನ್ನು ಒಳಗೊಂಡಂತೆ ಗ್ರಾಮಮಟ್ಟದಲ್ಲಿ ಮನೆ ಮನೆಗಳಲ್ಲಿ ದಸರಾ ನಡೆಯುವಂತಾಗಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆ, ಫಲಪುಷ್ಪ ಪ್ರದರ್ಶನ, ಲಲಿತಕಲೆ, ಸೇರಿದಂತೆ ಎಲ್ಲಾ ಚಟುವಟಿಕೆಗಳಲ್ಲಿ ವೈವಿಧ್ಯತೆ ಗುಣಮಟ್ಟ ಕೂಡಿರಬೇಕು. ಇದಕ್ಕೆ ಉಪಸಮಿತಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ವಿದ್ಯುತ್ ದೀಪಾಲಂಕಾರ ಹಿಂದೆಂದಿಗಿಂತಲೂ ಉತ್ತಮವಾಗಬೇಕು. ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು, ಜನಪ್ರತಿನಿಧಿಗಳ ಸಲಹೆ, ಸಹಕಾರ ಪಡೆದು ವೈಶಿಷ್ಟಪೂರ್ಣವಾಗಿ ದಸರಾ ಆಚರಣೆ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ.ಜಿ. ಶಂಕರ್, ಅವರು ಎಸ್ಪಿ ರಿಷ್ಯಾಂತ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಜಿಪಂ ಸಿಇಓ ಕೆ.ಜ್ಯೋತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಪಿ.ಎಸ್. ಕಾಂತರಾಜು, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago