ಮೈಸೂರು: ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಹೇಳಿದ್ದಾರೆ.
ದಸರಾ ಮಹೋತ್ಸವ ಸಿದ್ದತೆ ಕುರಿತು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶೀಲನ ಸಭೆ ನಡೆಸಿದ ಅವರು ಈ ವರ್ಷ ದಸರಾ ಮಹೋತ್ಸವ ಇನ್ನೂ ಭಕ್ತಿಯಿಂದ ಹೊಸ ನಾವಿನ್ಯತೆ ಜೊತೆಗೆ ಆಚರಿಸಬೇಕಿದೆ. ಇದಕ್ಕೆ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ದಸರಾ ಸಂಘಟನೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಅಗತ್ಯ ಪ್ರಮಾಣದ ಹಣ ಸರ್ಕಾರದಿಂದ ದೊರೆಯಲಿದೆ. ಆದರೆ ಅನುದಾನದಲ್ಲಿ ಒಂದು ರೂಪಾಯಿ ಕೂಡ ದುರ್ಬಳಕೆಯಾಗದಂತೆ ವ್ಯವಸ್ಥಿತವಾಗಿ ಹೆಚ್ಚು ಮೆರುಗಿನಿಂದ ಸಾಂಸ್ಕೃತಿಕ ನೆಲಗಟ್ಟಿನಲ್ಲಿ ನಾಡಹಬ್ಬ ಸಂಘಟನೆಯಾಗಬೇಕು ಎಂದು ಸಚಿವರು ಹೇಳಿದರು.
ಇದು ಜನರ ಉತ್ಸವವಾಗಬೇಕು, ಎಲ್ಲ ಜನಪ್ರತಿನಿಧಿಗಳು ಸಂಘಸಂಸ್ಥೆಗಳನ್ನು ಒಳಗೊಂಡಂತೆ ಗ್ರಾಮಮಟ್ಟದಲ್ಲಿ ಮನೆ ಮನೆಗಳಲ್ಲಿ ದಸರಾ ನಡೆಯುವಂತಾಗಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆ, ಫಲಪುಷ್ಪ ಪ್ರದರ್ಶನ, ಲಲಿತಕಲೆ, ಸೇರಿದಂತೆ ಎಲ್ಲಾ ಚಟುವಟಿಕೆಗಳಲ್ಲಿ ವೈವಿಧ್ಯತೆ ಗುಣಮಟ್ಟ ಕೂಡಿರಬೇಕು. ಇದಕ್ಕೆ ಉಪಸಮಿತಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ವಿದ್ಯುತ್ ದೀಪಾಲಂಕಾರ ಹಿಂದೆಂದಿಗಿಂತಲೂ ಉತ್ತಮವಾಗಬೇಕು. ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು, ಜನಪ್ರತಿನಿಧಿಗಳ ಸಲಹೆ, ಸಹಕಾರ ಪಡೆದು ವೈಶಿಷ್ಟಪೂರ್ಣವಾಗಿ ದಸರಾ ಆಚರಣೆ ಮಾಡಬೇಕು ಎಂದು ಹೇಳಿದರು.
ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ.ಜಿ. ಶಂಕರ್, ಅವರು ಎಸ್ಪಿ ರಿಷ್ಯಾಂತ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಜಿಪಂ ಸಿಇಓ ಕೆ.ಜ್ಯೋತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಪಿ.ಎಸ್. ಕಾಂತರಾಜು, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…