Featured

ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು : ವಿ. ಸೋಮಣ್ಣ -Vishwanews24

ಮೈಸೂರು: ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಹೇಳಿದ್ದಾರೆ.

ದಸರಾ ಮಹೋತ್ಸವ ಸಿದ್ದತೆ ಕುರಿತು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶೀಲನ ಸಭೆ ನಡೆಸಿದ ಅವರು ಈ ವರ್ಷ ದಸರಾ ಮಹೋತ್ಸವ ಇನ್ನೂ ಭಕ್ತಿಯಿಂದ ಹೊಸ ನಾವಿನ್ಯತೆ ಜೊತೆಗೆ ಆಚರಿಸಬೇಕಿದೆ. ಇದಕ್ಕೆ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ದಸರಾ ಸಂಘಟನೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಅಗತ್ಯ ಪ್ರಮಾಣದ ಹಣ ಸರ್ಕಾರದಿಂದ ದೊರೆಯಲಿದೆ. ಆದರೆ ಅನುದಾನದಲ್ಲಿ ಒಂದು ರೂಪಾಯಿ ಕೂಡ ದುರ್ಬಳಕೆಯಾಗದಂತೆ ವ್ಯವಸ್ಥಿತವಾಗಿ ಹೆಚ್ಚು ಮೆರುಗಿನಿಂದ ಸಾಂಸ್ಕೃತಿಕ ನೆಲಗಟ್ಟಿನಲ್ಲಿ ನಾಡಹಬ್ಬ ಸಂಘಟನೆಯಾಗಬೇಕು ಎಂದು ಸಚಿವರು ಹೇಳಿದರು.

ಇದು ಜನರ ಉತ್ಸವವಾಗಬೇಕು, ಎಲ್ಲ ಜನಪ್ರತಿನಿಧಿಗಳು ಸಂಘಸಂಸ್ಥೆಗಳನ್ನು ಒಳಗೊಂಡಂತೆ ಗ್ರಾಮಮಟ್ಟದಲ್ಲಿ ಮನೆ ಮನೆಗಳಲ್ಲಿ ದಸರಾ ನಡೆಯುವಂತಾಗಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆ, ಫಲಪುಷ್ಪ ಪ್ರದರ್ಶನ, ಲಲಿತಕಲೆ, ಸೇರಿದಂತೆ ಎಲ್ಲಾ ಚಟುವಟಿಕೆಗಳಲ್ಲಿ ವೈವಿಧ್ಯತೆ ಗುಣಮಟ್ಟ ಕೂಡಿರಬೇಕು. ಇದಕ್ಕೆ ಉಪಸಮಿತಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ವಿದ್ಯುತ್ ದೀಪಾಲಂಕಾರ ಹಿಂದೆಂದಿಗಿಂತಲೂ ಉತ್ತಮವಾಗಬೇಕು. ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು, ಜನಪ್ರತಿನಿಧಿಗಳ ಸಲಹೆ, ಸಹಕಾರ ಪಡೆದು ವೈಶಿಷ್ಟಪೂರ್ಣವಾಗಿ ದಸರಾ ಆಚರಣೆ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ.ಜಿ. ಶಂಕರ್, ಅವರು ಎಸ್ಪಿ ರಿಷ್ಯಾಂತ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಜಿಪಂ ಸಿಇಓ ಕೆ.ಜ್ಯೋತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಪಿ.ಎಸ್. ಕಾಂತರಾಜು, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago