Featured

ಐತಿಹಾಸಿಕ ಹೆಜ್ಜೆ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆ – Vishwanews24

ಐತಿಹಾಸಿಕ ಹೆಜ್ಜೆ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆ – Vishwanews24

ನವದೆಹಲಿ: ಕೋವಿಡ್ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಭಾರತದಿಂದ ಇಂದು ಮೈಲಿಗಲ್ಲು ಸೃಷ್ಟಿಯಾಗಲಿದೆ. ಇಂದು 100 ಕೋಟಿ (1 ಬಿಲಿಯನ್‌) ಲಸಿಕೆ ವಿತರಿಸಿ ಐತಿಹಾಸಿಕ ಸಾಧನೆಗೆ ಕ್ಷಣಗಣನೆ ಆರಂಭವಾಗಿದೆ.

ನಿನ್ನೆ ಮಧ್ಯರಾತ್ರಿಯವರೆಗೂ 99,85,16,644 ಡೋಸ್ ಹಂಚಿಕೆ ಆಗಿತ್ತು. ಈ ಮೂಲಕ 9 ತಿಂಗಳಲ್ಲಿ 100 ಕೋಟಿ ಡೋಸ್ ನೀಡಿದ ಗರಿಮೆಗೆ ಭಾರತ ಪಾತ್ರವಾಗಲಿದೆ. ಚೀನಾ ನಂತರ ಕಡಿಮೆ ಅವಧಿಯಲ್ಲಿ 100 ಕೋಟಿ ಲಸಿಕೆ ಸಾಧನೆ ಮಾಡಿದ ಎರಡನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಜನವರಿ 16ರಂದು ಮೊದಲ ವ್ಯಾಕ್ಸಿನ್ ನೀಡಲಾಗಿತ್ತು. ಆ ಬಳಿಕ 100 ಕೋಟಿ ಲಸಿಕೆ ವಿತರಿಸಲು 277 ದಿನ ಪಡೆದುಕೊಂಡಿದೆ. ದೇಶದ ಶೇ. 50ರಷ್ಟು ಮಂದಿಗೆ ಸಿಂಗಲ್ ಡೋಸ್ ಲಸಿಕೆ ಸಿಕ್ಕಿದರೆ ಶೇ.21ರಷ್ಟು ಮಂದಿಗೆ ಡಬಲ್ ಡೋಸ್ ಲಸಿಕೆ ಪೂರ್ಣವಾಗಿದೆ. 58,645 ಸರ್ಕಾರಿ, 2,019 ಖಾಸಗಿ ಕೇಂದ್ರ ಸೇರಿ ಒಟ್ಟು 60,664 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಮಾಡಲಾಗಿದೆ. ಲಸಿಕೆ ವಿತರಿಸಲು ಕೇಂದ್ರ ಸರ್ಕಾರ 35 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ.

ಟಾಪ್ 5 ವ್ಯಾಕ್ಸಿನ್ ರಾಜ್ಯಗಳು
ಉತ್ತರ ಪ್ರದೇಶ -12,19,47,031
ಮಹಾರಾಷ್ಟ್ರ – 9,28,41,727
ಪಶ್ಚಿಮ ಬಂಗಾಳ – 6,85,12,831
ಗುಜರಾತ್ – 6,76,67,794
ಕರ್ನಾಟಕ – 6,15,62,329 (8ನೇ ಸ್ಥಾನ)

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

7 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

7 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

9 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

9 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

9 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

9 hours ago