Featured

ಐತಿಹಾಸಿಕ ಹೆಜ್ಜೆ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆ – Vishwanews24

ಐತಿಹಾಸಿಕ ಹೆಜ್ಜೆ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆ – Vishwanews24

ನವದೆಹಲಿ: ಕೋವಿಡ್ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಭಾರತದಿಂದ ಇಂದು ಮೈಲಿಗಲ್ಲು ಸೃಷ್ಟಿಯಾಗಲಿದೆ. ಇಂದು 100 ಕೋಟಿ (1 ಬಿಲಿಯನ್‌) ಲಸಿಕೆ ವಿತರಿಸಿ ಐತಿಹಾಸಿಕ ಸಾಧನೆಗೆ ಕ್ಷಣಗಣನೆ ಆರಂಭವಾಗಿದೆ.

ನಿನ್ನೆ ಮಧ್ಯರಾತ್ರಿಯವರೆಗೂ 99,85,16,644 ಡೋಸ್ ಹಂಚಿಕೆ ಆಗಿತ್ತು. ಈ ಮೂಲಕ 9 ತಿಂಗಳಲ್ಲಿ 100 ಕೋಟಿ ಡೋಸ್ ನೀಡಿದ ಗರಿಮೆಗೆ ಭಾರತ ಪಾತ್ರವಾಗಲಿದೆ. ಚೀನಾ ನಂತರ ಕಡಿಮೆ ಅವಧಿಯಲ್ಲಿ 100 ಕೋಟಿ ಲಸಿಕೆ ಸಾಧನೆ ಮಾಡಿದ ಎರಡನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಜನವರಿ 16ರಂದು ಮೊದಲ ವ್ಯಾಕ್ಸಿನ್ ನೀಡಲಾಗಿತ್ತು. ಆ ಬಳಿಕ 100 ಕೋಟಿ ಲಸಿಕೆ ವಿತರಿಸಲು 277 ದಿನ ಪಡೆದುಕೊಂಡಿದೆ. ದೇಶದ ಶೇ. 50ರಷ್ಟು ಮಂದಿಗೆ ಸಿಂಗಲ್ ಡೋಸ್ ಲಸಿಕೆ ಸಿಕ್ಕಿದರೆ ಶೇ.21ರಷ್ಟು ಮಂದಿಗೆ ಡಬಲ್ ಡೋಸ್ ಲಸಿಕೆ ಪೂರ್ಣವಾಗಿದೆ. 58,645 ಸರ್ಕಾರಿ, 2,019 ಖಾಸಗಿ ಕೇಂದ್ರ ಸೇರಿ ಒಟ್ಟು 60,664 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಮಾಡಲಾಗಿದೆ. ಲಸಿಕೆ ವಿತರಿಸಲು ಕೇಂದ್ರ ಸರ್ಕಾರ 35 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ.

ಟಾಪ್ 5 ವ್ಯಾಕ್ಸಿನ್ ರಾಜ್ಯಗಳು
ಉತ್ತರ ಪ್ರದೇಶ -12,19,47,031
ಮಹಾರಾಷ್ಟ್ರ – 9,28,41,727
ಪಶ್ಚಿಮ ಬಂಗಾಳ – 6,85,12,831
ಗುಜರಾತ್ – 6,76,67,794
ಕರ್ನಾಟಕ – 6,15,62,329 (8ನೇ ಸ್ಥಾನ)

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

4 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

5 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

5 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

6 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

7 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

7 hours ago